ADVERTISEMENT

ಕಾಂಗ್ರೆಸ್‌ನಲ್ಲಿ ಅಯೋಗ್ಯರಿಗೆ ಜಾಗ ಇಲ್ಲ: ಸಚಿವ ರಮೇಶ್‌ಕುಮಾರ್‌

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2017, 19:25 IST
Last Updated 1 ಅಕ್ಟೋಬರ್ 2017, 19:25 IST
ಕಾಂಗ್ರೆಸ್‌ನಲ್ಲಿ ಅಯೋಗ್ಯರಿಗೆ ಜಾಗ ಇಲ್ಲ: ಸಚಿವ ರಮೇಶ್‌ಕುಮಾರ್‌
ಕಾಂಗ್ರೆಸ್‌ನಲ್ಲಿ ಅಯೋಗ್ಯರಿಗೆ ಜಾಗ ಇಲ್ಲ: ಸಚಿವ ರಮೇಶ್‌ಕುಮಾರ್‌   

ಕೋಲಾರ: ‘ಸಂಸ್ಕೃತಿ ಅರಿವಿಲ್ಲದ ಅಯೋಗ್ಯರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವುದಿಲ್ಲ, ಜನಪರ ಕಾಳಜಿ ಇರುವವರಿಗೆ ಸದಾ ಬಾಗಿಲು ತೆರೆದಿರುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಆರ್.ರಮೇಶ್‌ಕುಮಾರ್ ಹೇಳಿದರು.

ಸ್ಥಳೀಯ ಶಾಸಕ ವರ್ತೂರು ಪ್ರಕಾಶ್‌ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವಿರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ‘ಯೋಗ್ಯರು ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ಬರಲು ಅರ್ಹರು. ಅಯೋಗ್ಯರಿಗೆ ಕಾಂಗ್ರೆಸ್ ಪಕ್ಷದಲ್ಲಿ ಸ್ಥಾನವಿಲ್ಲ’ ಎಂದರು.

‘ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ. ದುರಹಂಕಾರದಿಂದ ಮಾತನಾಡುವವರು ಕಾಂಗ್ರೆಸ್ ಪಕ್ಷಕ್ಕೆ ಅನಿವಾರ್ಯವಲ್ಲ. ಅಂತಹವರು ಬಂದರೆ ಕಾಂಗ್ರೆಸ್ ಪಕ್ಷ ಉದ್ಧಾರ ಆಗುವುದಿಲ್ಲ. ಮುಂಬರುವ ವಿಧಾನಸಭೆ ಚುನಾವಣೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಯಲಿದೆ’ ಎಂದು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.