ಹುಬ್ಬಳ್ಳಿ: ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಪಾಲಿಕೆ ಸದಸ್ಯ ಅಲ್ತಾಫ್ ನವಾಜ್ ಕಿತ್ತೂರ ತಮ್ಮ ಉಮೇದುವಾರಿಕೆಯನ್ನ ಹಿಂಪಡೆದಿದ್ದಾರೆ.
ಶುಕ್ರವಾರ ಪಾಲಿಕೆ ಕಚೇರಿಗೆ ಆಗಮಿಸಿ ನಾಮಪತ್ರ ಹಿಂದಕ್ಕೆ ಪಡೆದಿರುವ ಅವರು ಕಾಂಗ್ರೆಸ್ ಅಭ್ಯರ್ಥಿ ಇಸ್ಮಾಯಿಲ್ ತಮಟಗಾರ್ಗೆ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸ್ಥಳೀಯ ಮಟ್ಟದ ನಾಯಕರಿಂದ ರಾಜ್ಯಮಟ್ಟದ ವರೆಗೂ ಎಲ್ಲರೂ ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಯಾರೂ ನನ್ನ ಪರ ಪ್ರಚಾರಕ್ಕೆ ಬಂದಿಲ್ಲ. ಬಸವರಾಜ ಹೊರಟ್ಟಿ ಅವರ ಮಾತನ್ನು ಯಾರೂ ಕೇಳುವುದಿಲ್ಲ. ಆದ್ದರಿಂದ ಜೆಡಿಎಸ್ನಿಂದ ಸಲ್ಲಿಸಿದ ನಾಮಪತ್ರ ವಾಪಸ್ ಪಡೆಯುತ್ತಿದ್ದೇನೆ. ಜೆಡಿಎಸ್ನಲ್ಲಿ ಹೊಂದಿರುವ ಎಲ್ಲ ಸ್ಥಾನಗಳಿಗೂ ರಾಜೀನಾಮೆ ಕೊಡುತ್ತೇನೆ’ ಎಂದು ಹೇಳಿದ್ದಾರೆ.
ಜೊತೆಗೆ 'ಸದ್ಯಕ್ಕೆ ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ' ಎಂದೂ ತಿಳಿಸಿದ್ದಾರೆ.
ಅಲ್ತಾಫ್ ಕಿತ್ತೂರ ಮೇಲೆ ಕಾಂಗ್ರೆಸ್ ಮುಖಂಡರಾದ ಜಮೀರ್ ಅಹ್ಮದ್ ಖಾನ್ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಸೇರಿದಂತೆ ಅನೇಕರು ಒತ್ತಡ ಹೇರಿದ್ದರು ಎಂಬ ಮಾತುಗಳು ಕೇಳಿಬಂದಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.