ADVERTISEMENT

ಕಾಂಗ್ರೆಸ್‌ ತೊರೆಯುವುದಿಲ್ಲ: ರಾಜಣ್ಣ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2017, 20:03 IST
Last Updated 2 ಅಕ್ಟೋಬರ್ 2017, 20:03 IST

ತುಮಕೂರು: ‘ನಾನು ಬೇರೆ ಪಕ್ಷಕ್ಕೆ ಸೇರುತ್ತೇನೆ ಎಂಬುದೆಲ್ಲ ಸುಳ್ಳು. ನಾನು ಯಾವುದೇ ಪಕ್ಷಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತೇನೆ. ಮುಂದಿನ ಚುನಾವಣೆಯಲ್ಲಿ ಮಧುಗಿರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ’ ಎಂದು ಶಾಸಕ ಕೆ.ಎನ್.ರಾಜಣ್ಣ ಹೇಳಿದರು.

'ಅಭಿಪ್ರಾಯ ಭೇದ, ಸಂಘರ್ಷ ಏನೇ ಇದ್ದರೂ ಈ ಪಕ್ಷದಲ್ಲಿದ್ದುಕೊಂಡೇ ಬಗೆಹರಿಸಿಕೊಳ್ಳುತ್ತೇನೆ. ಅದಕ್ಕಾಗಿ ಬೇರೆ ಪಕ್ಷಕ್ಕೆ ಹೋಗುವ ಕೆಲಸ ಮಾಡಲ್ಲ. ಕಾಂಗ್ರೆಸ್ ಪಕ್ಷ ಮತ್ತು ನನ್ನ ಸಂಬಂಧ ಒಂದು ರೀತಿ ಗಂಡ ಹೆಂಡತಿಯ ಸಂಬಂಧ ಇದ್ದ ಹಾಗೆ’ ಎಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ
ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಯಾವುದೇ ಅಧಿಕಾರ ಲಭಿಸಬೇಕಾ
ದರೆ ಯೋಗ ಮತ್ತು ಯೋಗ್ಯತೆ ಎರಡೂ ಇರಬೇಕಾಗುತ್ತದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಆಗಬಲ್ಲಂತಹ ಸಾಮರ್ಥ್ಯವುಳ್ಳ ಅನೇಕರಿದ್ದರು. ಆದರೆ, ಯೋಗ ಮತ್ತು ಯೋಗ್ಯತೆ ಎರಡೂ ಸಿದ್ದರಾಮಯ್ಯ ಅವರಿಗೆ ಇದ್ದುದರಿಂದ ಅವರಿಗೆ ಆ ಸ್ಥಾನ ಸಿಕ್ಕಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.