ADVERTISEMENT

ಕಾಂಗ್ರೆಸ್‌ ಪರ ಪ್ರಚಾರ: ಕ್ರಮ ಕೈಗೊಳ್ಳಲು ವಿ.ವಿ.ಗೆ ಪತ್ರ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2018, 19:47 IST
Last Updated 14 ಏಪ್ರಿಲ್ 2018, 19:47 IST

ಮೈಸೂರು: ಸರ್ಕಾರಿ ಹುದ್ದೆಯಲ್ಲಿದ್ದುಕೊಂಡು ಕಾಂಗ್ರೆಸ್‌ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಮೈಸೂರು ವಿಶ್ವವಿದ್ಯಾನಿಲಯದ ಇಬ್ಬರು ಪ್ರಾಧ್ಯಾಪಕರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಚುನಾವಣಾ ಅಧಿಕಾರಿಗಳು ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪತ್ರ ಬರೆದಿದ್ದಾರೆ.

ಮೈಸೂರು ವಿ.ವಿ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಬಿ.ಪಿ.ಮಹೇಶಚಂದ್ರ ಗುರು ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರೂ ಆದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಪ್ರಾಧ್ಯಾಪಕ ಅರವಿಂದ ಮಾಲಗತ್ತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ. ಮೈಸೂರಿನಲ್ಲಿ ಶುಕ್ರವಾರ ‘ಜನರಾಜಕಾರಣ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಿದ್ದರಾಮಯ್ಯ ಪರ ಮತಯಾಚಿಸಿದ್ದರು.

ಮೈಸೂರು ವಿ.ವಿ ಕುಲಸಚಿವರಾದ ಡಿ.ಭಾರತಿ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾ ಅಧಿಕಾರಿ ಬಿ.ವೆಂಕಟೇಶ್‌ ಪತ್ರ ಬರೆದು ಕ್ರಮಕ್ಕೆ ಸೂಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.