ADVERTISEMENT

ಕಾಂಗ್ರೆಸ್‌ ಪರ ಮತಕ್ಕೆ ಪ್ರೇರಣೆ: ಪ್ರಾಧ್ಯಾಪಕಿ ಅಮಾನತು

​ಪ್ರಜಾವಾಣಿ ವಾರ್ತೆ
Published 7 ಮೇ 2018, 9:41 IST
Last Updated 7 ಮೇ 2018, 9:41 IST
ಕಾಂಗ್ರೆಸ್‌ ಪರ ಮತಕ್ಕೆ ಪ್ರೇರಣೆ: ಪ್ರಾಧ್ಯಾಪಕಿ ಅಮಾನತು
ಕಾಂಗ್ರೆಸ್‌ ಪರ ಮತಕ್ಕೆ ಪ್ರೇರಣೆ: ಪ್ರಾಧ್ಯಾಪಕಿ ಅಮಾನತು   

ರಾಯಚೂರು: ಕಾಂಗ್ರೆಸ್‌ಗೆ ಮತ ನೀಡುವಂತೆ ಪ್ರೇರೆಪಿಸಿದ್ದಕ್ಕಾಗಿ ರಾಯಚೂರು ಕೃಷಿ ವಿವಿ ವ್ಯಾಪ್ತಿಯ ಕೃಷಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆಯನ್ನು ತಕ್ಷಣವೆ ಜಾರಿಗೆ ಬರುವಂತೆ ಮೂರು ತಿಂಗಳು ಅಮಾನತುಗೊಳಿಸಿ ವಿಶ್ವವಿದ್ಯಾಲಯದ ಕುಲಸಚಿವ ಜಂಬುನಾಥ ಗುತ್ತಿ ಸೋಮವಾರ ಆದೇಶ ಹೊರಡಿಸಿದ್ದಾರೆ.

ಬಳ್ಳಾರಿ ಸಂಸದ ಶ್ರೀರಾಮುಲು ವಿರುದ್ಧ ಮತ್ತು ಕಾಂಗ್ರೆಸ್‌ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷಪಾತದ ಅಭಿಪ್ರಾಯಗಳನ್ನು ದೇಶಮಾನ್ಯ ಅವರು ವ್ಯಕ್ತಪಡಿಸಿದ್ದಾರೆ ಎನ್ನುವ ದೂರು ಆಧರಿಸಿ ಜಿಲ್ಲಾ ಚುನಾವಣಾಧಿಕಾರಿ ಡಾ.ಬಗಾದಿ ಗೌತಮ್‌ ಅವರು ವಿಚಾರಣೆ ನಡೆಸಿದ್ದರು.

ದೇಶಮಾನ್ಯ ಅವರು ಪರೋಕ್ಷವಾಗಿ ರಾಜಕೀಯ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳಿಂದ ಗೊತ್ತಾಗಿದ್ದು, ಇವರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾ ಚುನಾವಣಾಧಿಕಾರಿ ಈಚೆಗೆ ಶಿಫಾರಸು ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.