ADVERTISEMENT

ಕಾಂಗ್ರೆಸ್ ರ್ಯಾಲಿ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2011, 19:30 IST
Last Updated 10 ಫೆಬ್ರುವರಿ 2011, 19:30 IST

ಬೆಂಗಳೂರು: ಕಾಂಗ್ರೆಸ್ ಮುಖಂಡ ಎಂ.ಪಿ.ಪ್ರಕಾಶ್ ನಿಧನ ಹಿನ್ನೆಲೆಯಲ್ಲಿ ಗುರುವಾರ ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ನಾಡರಕ್ಷಣಾ ರ್ಯಾಲಿಯನ್ನು ಮುಂದೂಡಲಾಗಿದೆ. ಪಕ್ಷದ ಮುಖಂಡರು ಪ್ರಕಾಶ್ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ತೆರಳಿರುವುದರಿಂದ ರ್ಯಾಲಿಯನ್ನು ಮುಂದೂಡಿದ್ದು, ರ್ಯಾಲಿಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು ಎಂದಿದ್ದಾರೆ.ಉಳಿದಂತೆ ಗುಲ್ಬರ್ಗದಲ್ಲಿ ಫೆ.13 ಮತ್ತು ಮೈಸೂರಿನಲ್ಲಿ ಫೆ.20ರಂದು ರ್ಯಾಲಿಗಳು ನಡೆಯಲಿವೆ ಎಂದು  ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.