ADVERTISEMENT

ಕಾಂಗ್ರೆಸ್ ಶವಪೆಟ್ಟಿಗೆಗೆ ಕೊನೆಯ ಮೊಳೆ

ಕಲ್ಲಡ್ಕ ಪ್ರಭಾಕರ್ ಭಟ್‌ರನ್ನು ಮುಟ್ಟಿ ನೋಡಿ: ರಾಜ್ಯ ಸರ್ಕಾರಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2017, 19:30 IST
Last Updated 13 ಜುಲೈ 2017, 19:30 IST
ಮಂಗಳೂರಿನಲ್ಲಿ ಗುರುವಾರ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತೆಯರು    -ಪ್ರಜಾವಾಣಿ ಚಿತ್ರ
ಮಂಗಳೂರಿನಲ್ಲಿ ಗುರುವಾರ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತೆಯರು -ಪ್ರಜಾವಾಣಿ ಚಿತ್ರ   

ಮಂಗಳೂರು:  ‘ನಿಜವಾದ ಆರೋಪಿಗಳನ್ನು ಬಂಧಿಸಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಾ. ಪ್ರಭಾಕರ್‌ ಭಟ್‌ ಕಲ್ಲಡ್ಕ, ನನ್ನನ್ನು ಬಂಧಿಸುವಂತೆ ಸೂಚನೆ ನೀಡುತ್ತಿದ್ದಾರೆ. ಒಂದು ವೇಳೆ ಪ್ರಭಾಕರ್ ಭಟ್ ಹಾಗೂ ನನ್ನನ್ನು ಮುಟ್ಟಿದ್ದೇ ಆದಲ್ಲಿ, ಅದು ಕಾಂಗ್ರೆಸ್‌ ಶವ ಪೆಟ್ಟಿಗೆಯ ಮೇಲಿನ ಕೊನೆಯ ಮೊಳೆ ಆಗಲಿದೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಎಚ್ಚರಿಸಿದರು.

ನಗರದ ಪುರಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಕೆಲಸ ಮಾಡಲಾಗದೇ ಸ್ವಯಂ ನಿವೃತ್ತಿ ಪಡೆದ ಕೆಂಪಯ್ಯ ಅವರನ್ನು ಕೂಡ್ರಿಸಿಕೊಂಡು ಮುಖ್ಯಮಂತ್ರಿಗಳು, ಪೊಲೀಸ್‌ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಇದರಿಂದ ಪೊಲೀಸ್‌ ಅಧಿಕಾರಿಗಳಿಗೆ ಅವಮಾನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT