ADVERTISEMENT

ಕಾಗೋಡು ತಿಮ್ಮಪ್ಪ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2011, 19:00 IST
Last Updated 14 ಸೆಪ್ಟೆಂಬರ್ 2011, 19:00 IST

ಸಾಗರ: ರಕ್ತದೊತ್ತಡ ಹಾಗೂ ಮಧುಮೇಹ ಸಮಸ್ಯೆಯಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಬಹಿರಂಗ ಸಭೆಯಲ್ಲೇ ನಿತ್ರಾಣಗೊಂಡು ಆಸ್ಪತ್ರೆ ಸೇರಿದ ಘಟನೆ ಬುಧವಾರ ನಡೆದಿದೆ.

ತಾಲ್ಲೂಕಿನ ಆನಂದಪುರಂನಲ್ಲಿ ಕಾಗೋಡು ತಿಮ್ಮಪ್ಪ ಅಭಿಮಾನಿ ಬಳಗ ಕಾಗೋಡು ಅವರಿಗೆ 80 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಿತ್ತು.

ಂತವೀರಪ್ಪಗೌಡ ಮಾತು ಮುಗಿಸುತ್ತಿದ್ದಂತೆ ವೇದಿಕೆಯಲ್ಲಿ ಕುಳಿತ ಜಾಗದಲ್ಲೇ ಕಾಗೋಡು ತೀವ್ರವಾಗಿ ಬಳಲಿದಂತೆ ಕಂಡುಬಂತು. ತಕ್ಷಣ ಅವರನ್ನು ಆನಂದಪುರಂನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ನಂತರ ಶಿವಮೊಗ್ಗದ ಆಸ್ಪತ್ರೆಗೆ  ದಾಖಲಿಸಲಾಯಿತು. ಅವರುಚೇತರಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.