ADVERTISEMENT

ಕಾಪು ಕ್ಷೇತ್ರದಿಂದ ಅನುಪಮಾ ಶೆಣೈ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2018, 19:39 IST
Last Updated 9 ಏಪ್ರಿಲ್ 2018, 19:39 IST

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನಶಕ್ತಿ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಅನುಪಮಾ ಶೆಣೈ ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

‘ವೈಯಕ್ತಿಕ ದ್ವೇಷ ಅಥವಾ ರಾಜಕೀಯ ದುರುದ್ದೇಶದಿಂದ ನಾನು ಚುನಾವಣೆಗೆ ನಿಲ್ಲುತ್ತಿಲ್ಲ. ನನ್ನ ಸ್ವಕ್ಷೇತ್ರದಲ್ಲಿಯೇ ಸ್ಪರ್ಧಿಸುವುದು ನನ್ನ ಆಯ್ಕೆ’ ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಪಕ್ಷದ 15 ಅಭ್ಯರ್ಥಿಗಳ ಪಟ್ಟಿ ಹಾಗೂ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು.

‘ಭ್ರಷ್ಟಾಚಾರ ಹಾಗೂ ದುರಾಡಳಿತದಿಂದ ನೊಂದ ಜನರಿಂದ ಸ್ಫೂರ್ತಿ ಪಡೆದು ಈ ಪಕ್ಷ ಹುಟ್ಟಿದೆ. ಮಹಿಳೆಯರು ಹಾಗೂ ಗ್ರಾಮದ ಜನರನ್ನು ತಲುಪುವ ಉದ್ದೇಶದಿಂದ ಪಕ್ಷಕ್ಕೆ ಬೆಂಡೆಕಾಯಿ ಚಿಹ್ನೆ ಇಡಲಾಗಿದೆ’ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಹಾದೇವ ಉದಗಾಂವಿ ಹೇಳಿದರು.

ADVERTISEMENT

ಸಿದ್ದರಾಮಯ್ಯ ಅವರ ದುಬಾರಿ ವಾಚ್‌ ಪ್ರಕರಣದ ಕುರಿತು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿದ್ದೇನೆ ಎಂದು ಅನುಪಮಾ ಶೆಣೈ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.