ADVERTISEMENT

ಕಾಮೇಗೌಡರಿಗೆ ‘ಬಸವ ಶ್ರೀ’ ಪ್ರಶಸ್ತಿ ಪ್ರದಾನ

ಮುರುಘಾ ಮಠದ ಅನುಭವ ಮಂಟಪದಲ್ಲಿ ನಡೆದ ವಿಶಿಷ್ಟ ಬಸವ ಜಯಂತಿ ಸಮಾರಂಭ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2018, 19:30 IST
Last Updated 15 ಏಪ್ರಿಲ್ 2018, 19:30 IST
ಚಿತ್ರದುರ್ಗದ ಮುರುಘಾಮಠದ ಅನುಭವಮಂಟಪದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಶಿವಮೂರ್ತಿ ಮುರುಘಾ ಶರಣರು 2017ನೇ ಸಾಲಿನ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿಯನ್ನು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿಯ ಸಣ್ಣ ಕೆರೆಗಳ ನಿರ್ಮಾತೃ ಕಾಮೇಗೌಡರಿಗೆ ಪ್ರದಾನ ಮಾಡಿದರು.
ಚಿತ್ರದುರ್ಗದ ಮುರುಘಾಮಠದ ಅನುಭವಮಂಟಪದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಶಿವಮೂರ್ತಿ ಮುರುಘಾ ಶರಣರು 2017ನೇ ಸಾಲಿನ ಪ್ರತಿಷ್ಠಿತ ‘ಬಸವಶ್ರೀ’ ಪ್ರಶಸ್ತಿಯನ್ನು ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿಯ ಸಣ್ಣ ಕೆರೆಗಳ ನಿರ್ಮಾತೃ ಕಾಮೇಗೌಡರಿಗೆ ಪ್ರದಾನ ಮಾಡಿದರು.   

ಚಿತ್ರದುರ್ಗ: ಸಣ್ಣ ಕೆರೆಗಳ (ಚೆಕ್‌ ಡ್ಯಾಂ) ನಿರ್ಮಾರ್ತೃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕು ದಾಸನದೊಡ್ಡಿ ಗ್ರಾಮದ ಕಾಮೇಗೌಡ ಅವರಿಗೆ ಇಲ್ಲಿನ ಮುರುಘಾ ಮಠದಿಂದ ನೀಡುವ 2017ನೇ ಸಾಲಿನ ಪ್ರತಿಷ್ಠಿತ ‘ಬಸವ ಶ್ರೀ’ ಪ್ರಶಸ್ತಿಯನ್ನು ಭಾನುವಾರ ಪ್ರದಾನ ಮಾಡಲಾಯಿತು.

ಮುರುಘಾ ಮಠದ ಆವರಣದಲ್ಲಿರುವ ಅನುಭವ ಮಂಟಪದಲ್ಲಿ ಆಯೋಜಿಸಲಾಗಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಶಿವಮೂರ್ತಿ ಮುರುಘಾ ಶರಣರು ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯು ₹ 5 ಲಕ್ಷ ನಗದು ಮತ್ತು ಫಲಕವನ್ನು ಒಳಗೊಂಡಿದೆ.

ಹುನುಗುಂದದ ಜಲಸಂರಕ್ಷಕ ಡಾ. ಮಲ್ಲಣ್ಣ ಶಂಕ್ರಪ್ಪ ನಾಗರಾಳ ಸೇರಿ ವಿವಿಧ ಮಠಾಧೀಶರು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಾಕ್ಷಿಯಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.