ಬೆಂಗಳೂರು: ಸಿಬ್ಬಂದಿಯ ಆದಾಯ ತೆರಿಗೆ ಪಾವತಿಸದ ಕಾರಣ, ಆದಾಯ ತೆರಿಗೆ ಇಲಾಖೆಯು ತನ್ನ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದು ಮಾಡಬೇಕು ಎಂದು ಕೋರಿ ವಿಜಯ್ ಮಲ್ಯ ಒಡೆತನದ ಕಿಂಗ್ಫಿಷರ್ ಏರ್ಲೈನ್ಸ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.
ಕಂಪೆನಿಯು ಸಿಬ್ಬಂದಿಯ ವೇತನದಿಂದ ಆದಾಯ ತೆರಿಗೆ (ಟಿಡಿಎಸ್) ಕಡಿತ ಮಾಡಿಕೊಂಡಿತ್ತು. ಆದರೆ ಅದನ್ನು ಇಲಾಖೆಗೆ ಪಾವತಿಸಿಲ್ಲ ಎಂದು ದೂರು ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯ ಮಲ್ಯ ಅವರಿಗೆ ಸಮನ್ಸ್ ಜಾರಿಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.