ADVERTISEMENT

ಕಾಯ್ದಿರಿಸಿದ ತೀರ್ಪು

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2013, 19:30 IST
Last Updated 4 ಡಿಸೆಂಬರ್ 2013, 19:30 IST

ಬೆಂಗಳೂರು: ಪುರಸಭೆ, ಪ.ಪಂ ನಗರ ಸಭೆಗಳ ಅಧ್ಯಕ್ಷ ಮತ್ತು ಉಪಾ­ಧ್ಯಕ್ಷ, ನಗರ ಪಾಲಿಕೆಗಳ ಮೇಯರ್‌ ಮತ್ತು ಉಪ ಮೇಯರ್‌ ಸ್ಥಾನಗಳಿಗೆ ಸರ್ಕಾರ ಸಿದ್ಧಪಡಿಸಿದ್ದ ಮೀಸಲಾತಿ ಪಟ್ಟಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂ­ಧಿಸಿದ ಆದೇಶವನ್ನು ಹೈಕೋರ್ಟ್‌ ಕಾಯ್ದಿರಿಸಿದೆ.

ಮಂಗಳೂರು ಮಹಾ­­ನಗರ ಪಾಲಿಕೆ ಸದಸ್ಯ ಅಬ್ದುಲ್‌ ಅಜೀಜ್‌ ಮತ್ತು ದಾವ­ಣಗೆರೆಯ ಎಚ್‌.ಕೆ. ಹಾಲೇಶ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌ ಏಕಸದಸ್ಯ ಪೀಠ, ಮೀಸಲಾತಿ ಪಟ್ಟಿಗೆ ಸೆ. 5ರಂದು ತಡೆಯಾಜ್ಞೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.