ಸುವರ್ಣ ಸೌಧ (ಬೆಳಗಾವಿ): ಜಾನುವಾರುಗಳನ್ನು ಕಾಡುತ್ತಿರುವ ಕಾಲು ಬಾಯಿ ರೋಗಕ್ಕೆ ಪಲ್ಸ್ ಪೋಲಿಯೊ ಮಾದರಿಯಲ್ಲಿ ಅಭಿಯಾನ ನಡೆಸಿ ಲಸಿಕೆ ಹಾಕಲಾಗುವುದು ಎಂದು ಪಶು ಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ ವಿಧಾನ ಪರಿಷತ್ತಿಗೆ ತಿಳಿಸಿದರು.
ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ‘ಕಾಲು ಬಾಯಿ ರೋಗ ತಡೆಗೆ ಲಸಿಕೆಯೊಂದೇ ಮದ್ದು. ಮೂರು ವರ್ಷಗಳಲ್ಲಿ ಈ ಪ್ರಕ್ರಿಯೆ ಸರಿಯಾಗಿ ನಡೆಯದ ಕಾರಣ ರೋಗ ಹೆಚ್ಚುತ್ತಿದೆ. ಈಗ 5ನೇ ಸುತ್ತಿನ ಲಸಿಕೆ ಕಾರ್ಯಕ್ರಮ ನಡೆಯುತ್ತಿದೆ. ಲಸಿಕೆ ಹಾಕುವ ಕಾರ್ಯಕ್ಕೆ ಸಿಬ್ಬಂದಿ ಕೊರತೆ ಕಾಡುತ್ತಿದ್ದು ಬೇರೆ ಇಲಾಖೆಯಿಂದ ಸಿಬ್ಬಂದಿಯನ್ನು ಎರವಲು ಪಡೆಯಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.