ADVERTISEMENT

ಕಾಲುವೆಗೆ ಚಕ್ಕಡಿ: ಮೂವರ ಸಾವು

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2012, 19:30 IST
Last Updated 20 ಫೆಬ್ರುವರಿ 2012, 19:30 IST

ಬೆಳಗಾವಿ: ಸವದತ್ತಿ ತಾಲ್ಲೂಕಿನ ಮುಗಳಿಹಾಳ ಗ್ರಾಮದ ಬಳಿ ಸೋಮವಾರ ರಾತ್ರಿ ಕಾಲುವೆಗೆ ಚಕ್ಕಡಿ ಗಾಡಿ ಉರುಳಿ ಬಿದ್ದು ಮೂವರು  ಮಹಿಳೆಯರು ಮೃತಪಟ್ಟಿದ್ದಾರೆ.

ಮೃತಪಟ್ಟವರನ್ನು ಮುಗುಳಿಹಾಳ ಗ್ರಾಮದ ಸಂಗೀತಾ ಎಲ್ಲಪ್ಪ ಗಾಣಿಗೇರ (14), ಈಕೆಯ ಅಕ್ಕ ಸರೋಜಿನಿ (18) ಮತ್ತು ಭಾರತಿ ಮುತ್ತೆಪ್ಪ ಗಾಣಿಗೇರ (12) ಗುರುತಿಸಲಾಗಿದೆ.

ಚಕ್ಕಡಿಯಲ್ಲಿ ಒಟ್ಟು 12 ಜನರಿದ್ದರು. ನಾಲ್ವರು ಮಹಿಳೆಯರು ಪ್ರಾಣಾಪಾಯದಿಂದ ಪಾರಾಗಿದ್ದು, ಉಳಿದ ಐವರಿಗಾಗಿ ಶೋಧ ಕಾರ್ಯ ನಡೆದಿದೆ.

ADVERTISEMENT

ದುರಂತ ಕುರಿತು ಗೊತ್ತಾದ ಕೂಡಲೇ ನೀರಾವರಿ ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚಿಸಲಾಗಿದೆ.  ನೀರು ಹರಿಯುವುದನ್ನು ತಕ್ಷಣವೇ ನಿಲ್ಲಿಸಿ, ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಂದೀಪ ಪಾಟೀಲ `ಪ್ರಜಾವಾಣಿ~ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.