ADVERTISEMENT

‘ಕಾವೇರಿ: ರಾಜ್ಯಕ್ಕೆ ಅನ್ಯಾಯವಾದರೆ ಉಪವಾಸ’

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2018, 18:44 IST
Last Updated 28 ಏಪ್ರಿಲ್ 2018, 18:44 IST

ಹುಣಸೂರು: 'ಕಾವೇರಿ ವಿಚಾರದಲ್ಲಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದು ನ್ಯಾಯಾಲಯಕ್ಕೆ ಹೋಗಿದೆ. ರಾಜ್ಯಕ್ಕೆ ವ್ಯತಿರಿಕ್ತವಾಗಿ ತೀರ್ಪು ಬಂದರೆ ಉಪವಾಸ ಸತ್ಯಾಗ್ರಹ ಕುಳಿತು ನ್ಯಾಯ ಕೊಡಿಸಲು ಈ ನಿಮ್ಮ ಗೌಡ ಇಳಿವಯಸ್ಸಿನಲ್ಲೂ ಸಿದ್ಧ' ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ
ತಿಳಿಸಿದರು.

ತಾಲ್ಲೂಕಿನ ಬಿಳಿಕೆರೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಎಚ್‌.ವಿಶ್ವನಾಥ್‌ ಪರ ರೋಡ್‌ ಶೋ ನಡೆಸಿ ಅವರು ಮಾತನಾಡಿದರು.

'ರಾಷ್ಟ್ರೀಯ ಪಕ್ಷ ಎಂದು ಬಡಾಯಿ ಕೊಚ್ಚಿಕೊಳ್ಳುವ ಕಾಂಗ್ರೆಸ್‌, ಬಿಜೆಪಿ, ಕಾವೇರಿ ವಿಚಾರದಲ್ಲಿ ರಾಜ್ಯದ ಜನರಿಗೆ ದ್ರೋಹ ಮಾಡಿವೆ. ಅವು ಕಾವೇರಿ ಹೋರಾಟದಲ್ಲಿ ರಾಜ್ಯಕ್ಕೆ ಕೊಟ್ಟ ಕೊಡುಗೆ ಏನು? ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಕ್ರಮ ತೆಗೆದುಕೊಂಡರು? ಈ ಬಗ್ಗೆ
ಜನರಿಗೆ ತಿಳಿಸಲಿ' ಎಂದು ಸವಾಲು ಹಾಕಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.