ADVERTISEMENT

ಕುಡಿಯಲಷ್ಟೇ ಕಾವೇರಿ: ಪರಿಷತ್‌ನಲ್ಲಿ ನಿರ್ಣಯ ಅಂಗೀಕಾರ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2016, 9:40 IST
Last Updated 23 ಸೆಪ್ಟೆಂಬರ್ 2016, 9:40 IST
–ಸಂಗ್ರಹ ಚಿತ್ರ
–ಸಂಗ್ರಹ ಚಿತ್ರ   

ಬೆಂಗಳೂರು: ಕಾವೇರಿ ಕೊಳ್ಳದ ಕೆಆರ್‌ಎಸ್‌, ಹೇಮಾವತಿ, ಹಾರಂಗಿ ಮತ್ತು ಕಬಿನಿ ಜಲಾಶಯಗಳ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳಲು ವಿಧಾನ ಪರಿಷತ್‌ನಲ್ಲಿ ನಿರ್ಣಯ ಅಂಗೀಕರಿಸಲಾಯಿತು.

ಕಲಾಪ ಆರಂಭವಾದ ನಂತರ ಮೊದಲಿಗೆ ಅಗಲಿದ ರಾಜಕೀಯ ಮುಖಂಡರು ಹಾಗೂ ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಲಾಯಿತು.

ಪರಿಷತ್‌ನಲ್ಲಿ ಎ. ರವಿ ನಿರ್ಣಯ ಮಂಡಿಸಿದರು. ವಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ನಿರ್ಣಯ ಅನುಮೋದಿಸಿದರು. ಜೆಡಿಎಸ್‌ ಮುಖಂಡ ಬಸವರಾಜ ಹೊರಟ್ಟಿ ರಾಜ್ಯದ ಸಂಕಷ್ಟ ಸ್ಥಿತಿಯ ಬಗ್ಗೆ ಮಾತನಾಡಿದರು.

ADVERTISEMENT

ಬಳಿಕ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಲಾಯಿತು.

ಪರಿಷತ್‌ನಲ್ಲಿ ಅಂಗೀಕರಿಸಿದ ನಿರ್ಣಯ ಪತ್ರ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.