ADVERTISEMENT

ಕುಮಾರಸ್ವಾಮಿ ಪದಗ್ರಹಣಕ್ಕೆ ಮಳೆ ಅಡ್ಡಿ?

​ಪ್ರಜಾವಾಣಿ ವಾರ್ತೆ
Published 23 ಮೇ 2018, 9:25 IST
Last Updated 23 ಮೇ 2018, 9:25 IST
ಕುಮಾರಸ್ವಾಮಿ ಪದಗ್ರಹಣಕ್ಕೆ ಮಳೆ ಅಡ್ಡಿ?
ಕುಮಾರಸ್ವಾಮಿ ಪದಗ್ರಹಣಕ್ಕೆ ಮಳೆ ಅಡ್ಡಿ?   

ಬೆಂಗಳೂರು: ಕುಮಾರಸ್ವಾಮಿ ಪ್ರಮಾಣ ವಚನಕ್ಕೆ ಎರಡು ಗಂಟೆ ಬಾಕಿ ಇರುವಾಗಲೇ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.

ಸಮಾರಂಭಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಅಭಿಮಾನಿಗಳು, ಕಾಂಗ್ರೆಸ್ ಮತ್ತು ಜೆಡಿಎಸ್‌ ಕಾರ್ಯಕರ್ತರು ಮಳೆಯಲ್ಲೇ ಕುಮಾರಸ್ವಾಮಿಗೆ ಜೈಕಾರ ಹಾಕುತ್ತ ಉತ್ಸಾಹ ಮೆರೆಯುತ್ತಿದ್ದಾರೆ.

ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಿರುವ ಜನರು ಮಳೆಯಿಂದ ತಪ್ಪಿಸಿಕೊಳ್ಳಲು ಕುರ್ಚಿಗಳು, ಕೌಟೌಟ್‌, ಬ್ಯಾನರ್‌ಗಳನ್ನು ಛತ್ರಿಗಳನ್ನಾಗಿ ಹಿಡಿದುಕೊಂಡಿದ್ದಾರೆ.

ADVERTISEMENT

ಮಳೆಯ ನಡುವೆಯೂ ಕಾರ್ಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.

ವಿಧಾನಸೌಧದ ಮುಂಭಾಗದಲ್ಲಿ ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.