ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ನಿಯೋಜಿತ ಉಪಮುಖ್ಯಮಂತ್ರಿ ಡಾ. ಪರಮೇಶ್ವರ್ ಅವರ ನಿವಾಸದಲ್ಲಿ ಬುಧವಾರ ಬೆಳಗ್ಗೆ ಸಂಭ್ರಮ ಮನೆ ಮಾಡಿತ್ತು.
ಜೆ. ಪಿ.ನಗರದಲ್ಲಿನ ಕುಮಾರಸ್ವಾಮಿ ನಿವಾಸದ ಮುಂದೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಅಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಪ್ರದರ್ಶನ ನೀಡುವುದರ ಮೂಲಕ ಜಾತ್ರೆಯ ವಾತಾವರಣ ನಿರ್ಮಾಣವಾಗಿತ್ತು. ಬೆಳಗ್ಗೆಯಿಂದಲೇ ಪೂಜಾ ಕಾರ್ಯಗಳು ನಡೆಯುತ್ತಿದ್ದವು.
ಸದಾಶಿವ ನಗರದಲ್ಲಿನ ಪರಮೇಶ್ವರ್ ಅವರ ನಿವಾಸದ ಮುಂದೆಯೂ ಅಭಿಮಾನಿಗಳು ನೆರೆದಿದ್ದರು. ಅವರ ಮನೆಯನ್ನು ಹೂಗಳಿಂದ ಅಲಂಕರಿಸಲಾಗಿತ್ತು. ಬೆಳಗ್ಗೆಯಿಂದಲೂ ಪರಮೇಶ್ವರ್ ನಿವಾಸದಲ್ಲೂ ಪೂಜೆ ನಡೆಯುತ್ತಿತ್ತು. ಪರಮೇಶ್ವರ್ ಅವರಿಗೆ ಶುಭಾಶಯ ಕೋರಲು ಬರುತ್ತಿದ್ದ ಅಭಿಮಾನಿಗಳಿಗೆ ಅರ್ಚಕರು ಹಣೆಗೆ ತಿಲಕವಿಟ್ಟು ಪ್ರಸಾದ ನೀಡುತ್ತಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.