ADVERTISEMENT

ಕುಮಾರಸ್ವಾಮಿ ಭೇಟಿಯಲ್ಲಿ ರಾಜಕೀಯ ಉದ್ದೇಶ ಇಲ್ಲ: ಶಿವರಾಜ್ ಕುಮಾರ್‌

​ಪ್ರಜಾವಾಣಿ ವಾರ್ತೆ
Published 27 ಮೇ 2018, 7:33 IST
Last Updated 27 ಮೇ 2018, 7:33 IST
ಶಿವರಾಜ್‌ ಕುಮಾರ್ ದಂಪತಿ ಮತ್ತು ಕುಮಾರಸ್ವಾಮಿ
ಶಿವರಾಜ್‌ ಕುಮಾರ್ ದಂಪತಿ ಮತ್ತು ಕುಮಾರಸ್ವಾಮಿ   

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಂದುಕೊಂಡಿದ್ದನ್ನು ಸಾಧಿಸಲಿ ಎಂದು ಅವರಿಗೆ ಶುಭಕೋರಿದ್ದೇನೆ ಎಂದು ನಟ ಶಿವರಾಜ್‌ ಕುಮಾರ್ ತಿಳಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ನಿವಾಸಕ್ಕೆ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್‌ಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಅವರು ಮಾತನಾಡಿದರು.

ಕುಮಾರಸ್ವಾಮಿ ಸಿಎಂ ಆದನಂತರ ಭೇಟಿ ಮಾಡಿರಲಿಲ್ಲ, ಅವರಿಗೆ ಶುಭ ಕೋರಲು ಆಗಮಿಸಿದ್ದೆ, ಈ ಭೇಟಿಯಲ್ಲಿ ಯಾವುದೇ ರಾಜಕೀಯ ಉದ್ದೇಶವಿರಲಿಲ್ಲ ಎಂದು ಶಿವರಾಜ್ ಕುಮಾರ್ ತಿಳಿಸಿದರು.

ADVERTISEMENT

ಮುಖ್ಯವಾಗಿ ಕುಮಾರಸ್ವಾಮಿಯವರು ಸಿನಿಮಾ ರಂಗದಲ್ಲಿ ನಿರ್ಮಾಪಕರಾಗಿ ಸೇವೆ ಸಲ್ಲಿಸಿದವರು. ಹಿಗಾಗಿ ನನ್ನ ಮತ್ತು ಅವರ ನಡುವಿನ ಒಡನಾಟ ಬಹಳ ಹಿಂದಿನದು ಎಂದರು.

ಕುಮಾರಸ್ವಾಮಿ ಯವರು ರಾಜ್ಯದ ಅಭಿವೃದ್ಧಿ ಬಗ್ಗೆ ಅವರದ್ದೆ ಆದ ಕನಸನ್ನು ಹೊಂದಿದ್ದಾರೆ, ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂಬುದೇ ನನ್ನ ಆಶಯ ಎಂದು ಶಿವರಾಜ್‌ ಕುಮಾರ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.