ADVERTISEMENT

ಕೆಜೆಪಿ ಉಪಾಧ್ಯಕ್ಷರಿಗೆ ಬೆದರಿಕೆ ಕರೆ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2012, 19:59 IST
Last Updated 17 ಡಿಸೆಂಬರ್ 2012, 19:59 IST

ಬೆಂಗಳೂರು: `ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕರ್ನಾಟಕ, ರಾಮ ರಾಜ್ಯ ಆಗುವ ಬದಲು ಗೂಂಡಾ ರಾಜ್ಯ ಆಗಿದೆ' ಎಂದು ಕೆಜೆಪಿ ಉಪಾಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ್ ಆರೋಪಿಸಿದರು.

`ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರಿಂದ ನನಗೆ ಕೆಲವು ಬೆದರಿಕೆ ಕರೆಗಳು ಬಂದಿವೆ' ಎಂದು ಅವರು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

`ಬಿಜೆಪಿ ಸರ್ಕಾರವೆಂದರೆ, ಯಡಿಯೂರಪ್ಪ ಅವರ ಆಡಳಿತಾವಧಿಯೂ ಸೇರಿದೆ ಅಲ್ಲವೇ?' ಎಂಬ ಪ್ರಶ್ನೆಗೆ, `ಅವರ ಅವಧಿಯಲ್ಲೂ ರಾಜ್ಯದ ಕಾನೂನು - ಸುವ್ಯವಸ್ಥೆ ಅಲ್ಪಸ್ವಲ್ಪ ಏರುಪೇರು ಆಗಿದ್ದಿರಬಹುದು' ಎಂದು ಉತ್ತರಿಸಿದರು.

ಕಾವೇರಿ ನದಿ ನೀರಿನ ಹಂಚಿಕೆ ವಿಷಯದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಕರ್ನಾಟಕದ ಹಿತಕ್ಕೆ ಧಕ್ಕೆ ತಂದರೆ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಕೆಜೆಪಿ ವತಿಯಿಂದ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.