ADVERTISEMENT

ಕೇಂದ್ರ ಸಚಿವ ರಾಜ್ಯವರ್ಧನ ಸಿಂಗ್‌ ರಾಠೋಡ್‌ ಬೆಳಗಾವಿಗೆ ಭೇಟಿ

​ಪ್ರಜಾವಾಣಿ ವಾರ್ತೆ
Published 12 ಜೂನ್ 2017, 8:57 IST
Last Updated 12 ಜೂನ್ 2017, 8:57 IST
ಕೇಂದ್ರ ಸಚಿವ ರಾಜ್ಯವರ್ಧನ ಸಿಂಗ್‌ ರಾಠೋಡ್‌ ಬೆಳಗಾವಿಗೆ ಭೇಟಿ
ಕೇಂದ್ರ ಸಚಿವ ರಾಜ್ಯವರ್ಧನ ಸಿಂಗ್‌ ರಾಠೋಡ್‌ ಬೆಳಗಾವಿಗೆ ಭೇಟಿ   

ಬೆಳಗಾವಿ: ಕೇಂದ್ರ ಸರ್ಕಾರದ ಆಡಳಿತ ವೈಖರಿಯ ಬಗ್ಗೆ ಜನರ ಅಭಿಪ್ರಾಯಗಳನ್ನು ಸಂಗ್ರಹಿಸಲು ದೇಶದಾದ್ಯಂತ ಜನಸಂಪರ್ಕ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಕೇಂದ್ರ ಮಾಹಿತಿ ಹಾಗೂ ಪ್ರಚಾರ ಖಾತೆ ರಾಜ್ಯ ಸಚಿವ ರಾಜ್ಯವರ್ಧನಸಿಂಗ್ ರಾಠೋಡ್‌ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಮಸ್ಯೆಗಳ ಬಗೆಹರಿಸಲು ಕೇಂದ್ರ ಸರ್ಕಾರವು ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದರು.

ದೇಶದಲ್ಲಿ ಪ್ರಜಾಪ್ರಭುತ್ವವಿದ್ದು, ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಪತ್ರಿಕಾ, ಮಾಧ್ಯಮ ಮತ್ತು ವಾಕ್ ಸ್ವಾತಂತ್ರ್ಯಕ್ಕೆ ಹೆಚ್ಚಿನ ಬೆಲೆ ದೇಶದಲ್ಲಿ ಇದೆ. ಕಾಂಗ್ರೆಸ್ ಹೊರ ತರಲು ಹೊರಟಿರುವ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಬಗ್ಗೆ ಯಾವುದೇ ಅಭ್ಯಂತರವಿಲ್ಲ. ಕಾನೂನುಬದ್ಧವಾಗಿ ಪತ್ರಿಕೆ ಪ್ರಕಟವಾದರೆ ಕೇಂದ್ರ ಸರ್ಕಾರ ಏಕೆ ಆಕ್ಷೇಪಿಸಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.