ಮಂಗಳೂರು: ರಾಜ್ಯದಲ್ಲಿರುವ ಕೈಗಾರಿಕಾ ವಸಾಹತುಗಳ ಅಭಿವೃದ್ಧಿಗಾಗಿ ‘ಕೈಗಾರಿಕಾ ನಗರ ಪ್ರಾಧಿಕಾರ’ಗಳನ್ನು (ಇಂಡಸ್ಟ್ರಿಯಲ್ ಟೌನ್ಶಿಪ್ ಅಥಾರಿಟಿ) ಸ್ಥಾಪಿಸಲು ‘ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯಿದೆ –1976’ ಕ್ಕೆ ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡಿಸಲಾಗವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಹೇಳಿದರು.
ಲೆಕ್ಟ್ರಾನಿಕ್ ಸಿಟಿಯನ್ನು ಹೊರತುಪಡಿಸಿದರೆ, ರಾಜ್ಯದಲ್ಲಿರುವ ಉಳಿದ ಕೈಗಾರಿಕಾ ವಸಾಹತುಗಳು ಸ್ಥಳೀಯಾಡಳಿತ ಸಂಸ್ಥೆಗಳ ಅಧೀನ ದಲ್ಲಿವೆ. ಪ್ರಾಧಿಕಾರವು ಅಸ್ತಿತ್ವಕ್ಕೆ ಬಂದ ಬಳಿಕ ಮೂಲಸೌಕರ್ಯ ಒದಗಿ ಸುವುದು, ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಸಂಬಂಧಿಸಿದ ಅಧಿಕಾರ ಪ್ರಾಧಿಕಾರಕ್ಕೆ ದೊರಕುತ್ತದೆ ಎಂದು ವಿವರಿಸಿದರು.
‘ಈ ಬಗ್ಗೆ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಜೊತೆ ಚರ್ಚಿಸಿ, ತಿದ್ದುಪಡಿಯನ್ನು ಮಸೂದೆಯನ್ನು ಮಂಡಿಸಲಾಗುವುದು. ಪ್ರಾಧಿಕಾರದಲ್ಲಿ ಎಂಟು ಸದಸ್ಯರು ಇರಲಿದ್ದಾರೆ. ಈ ಪೈಕಿ ಐವರು ಸದಸ್ಯರನ್ನು ಸರ್ಕಾರ ನೇಮಕ ಮಾಡಿದರೆ, ಒಬ್ಬರು ಸ್ಥಳೀಯ ವಾಣಿಜ್ಯೋದ್ಯಮ ಸಂಸ್ಥೆಯ ಪ್ರತಿನಿಧಿ, ಇನ್ನೊಬ್ಬರು ಸ್ಥಳೀಯಾಡಳಿತ ಸಂಸ್ಥೆಯ ಪ್ರತಿನಿಧಿ ಹಾಗೂ ಒಬ್ಬರು ಸ್ಥಳೀಯ ಕೈಗಾರಿಕೋದ್ಯಮಿ ಇರುತ್ತಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.