ಮಂಗಳೂರು: ನಗರದ ಕೊಡಿಯಾಲ್ ಬೈಲ್ನ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ತಡರಾತ್ರಿ ಕೈದಿಗಳು ಜೈಲಿನ ವಾರ್ಡನ್ ಹಾಗೂ ಅಧೀಕ್ಷಕರ ಮೇಲೆ ಹಲ್ಲೆ ನಡೆಸಿದ್ದಾರೆ.
ಎ ಬ್ಲಾಕ್ನ ಮೊದಲ ಸೆಲ್ನಲ್ಲಿ ಇದ್ದ ಇಬ್ಬರು ಕೈದಿಗಳು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಇದನ್ನು ವಿಚಾರಿಸಲು ಜೈಲು ಅಧೀಕ್ಷಕ ಪರಮೇಶ್ ಸೆಲ್ಗೆ ತೆರಳಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಸೆಲ್ನಿಂದ ಹೊರಬಂದ ಕೈದಿಗಳು, ಜೈಲಿನ ಆವರಣದಲ್ಲಿದ್ದ ಟ್ಯೂಬ್ಲೈಟ್ ಹಾಗೂ ಸಿಸಿಟಿವಿ ಕ್ಯಾಮೆರಾಗಳಿಗೆ ಹಾನಿ ಮಾಡಿದ್ದಾರೆ.
ಜೈಲು ವಾರ್ಡನ್ ಮುತ್ತಪ್ಪ ಹಾಗೂ ಪರಮೇಶ್ ಅವರ ಮೇಲೂ ಕೈದಿಗಳು ಹಲ್ಲೆ ಮಾಡಿದ್ದಾರೆ. ಪರಮೇಶ್ ಅವರ ಹಣೆಯ ಬಲಭಾಗಕ್ಕೆ ಪೆಟ್ಟುಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್ಪೆಕ್ಟರ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಹನುಮಂತರಾಯ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.