ಮಡಿಕೇರಿ: ಬಿಜೆಪಿ ಕರೆ ನೀಡಿರುವ ಬಂದ್ ಗೆ ಕೊಡಗಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನರಲ್ ತಿಮ್ಮಯ್ಯ ವೃತ್ತ, ಖಾಸಗಿ ಬಸ್ ನಿಲ್ದಾಣ ಹೊರತು ಪಡಿಸಿದರೆ ನಗರದ ಬಹುತೇಕ ಕಡೆ ಅಂಗಡಿ ಮುಂಗಟ್ಟುಗಳು ತೆರೆದಿವೆ.
ಖಾಸಗಿ ಬಸ್ ಹಾಗೂ ಆಟೊ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕೆಎಸ್ ಆರ್ ಟಿಸಿ ಬಸ್ ಹಾಗೂ ಖಾಸಗಿ ವಾಹನಗಳ ಸಂಚಾರ ಎಂದಿನಂತೆಯೇ ಇದೆ.
ವಿರಾಜಪೇಟೆ ಹಾಗೂ ಸೋಮವಾರಪೇಟೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗತ್ತಿದೆ. ಜನಜೀವನ ಸಹಜಸ್ಥಿತಿಯಲ್ಲಿದೆ.
ಶಾಸಕ ಕೆ.ಜಿ. ಬೋಪಯ್ಯ ನೇತೃತ್ವದಲ್ಲಿ ಮಡಿಕೇರಿ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮುಂದುವರಿದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.