ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಮಂಗಳವಾರ ರಾತ್ರಿ ವಿವಿಧೆಡೆ ಧಾರಾಕಾರ ಮಳೆ ಸುರಿಯಿತು. ಗೋಣಿಕೊಪ್ಪಲು ಭಾಗದಲ್ಲಿ ಸಂಜೆ ಉತ್ತಮ ಮಳೆ ಸುರಿಯಿತು. ಹೀಗಾಗಿ, ಕೊನೆಕ್ಷಣದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಬಹಿರಂಗ ಪ್ರಚಾರ ಸಭೆ ರದ್ದುಗೊಳಿಸಲಾಯಿತು.
ಕುಮಟಾದಲ್ಲಿ ಪ್ರಚಾರ ಮುಗಿಸಿ ಕೊಡಗಿಗೆ ಆದಿತ್ಯನಾಥ ಬರಬೇಕಿತ್ತು.
ಕುಶಾಲನಗರ, ಸೋಮವಾರಪೇಟೆ, ನಾಪೋಕ್ಲು, ಭಾಗಮಂಡಲ, ತಲಕಾವೇರಿ, ಮಡಿಕೇರಿ, ಉಡೋತ್, ಬೆಟ್ಟಗೇರಿ, ಮಾದಾಪುರ, ಆವಂದೂರು, ವಿರಾಜಪೇಟೆಯಲ್ಲಿ ರಾತ್ರಿ ಭಾರಿ ಮಳೆಯಾಗಿದೆ. ಗಾಳಿಗೆ ಅಲ್ಲಲ್ಲಿ ಮರಗಳು ಧರೆಗೆ ಉರುಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.