ಕೊಪ್ಪಳ: ಜಿಲ್ಲೆಯ ಹಲವೆಡೆ ಭಾನುವಾರ ನಸುಕಿನಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಕೊಪ್ಪಳ ನಗರದ ಹಲವೆಡೆ ಮಳೆಯಿಂದಾಗಿ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ನಗರದ ಗಡಿಯಾರ ಕಂಬದ ಬಳಿ ಕಾಂಪ್ಲೆಕ್ಸ್ಗೆ ನೀರು ನುಗ್ಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ.
ಹಲವು ಅಂಗಡಿಗಳಿಗೆ ನೀರು ನುಗ್ಗಿದ್ದು, ಬಹುತೇಕ ವಸ್ತುಗಳು ನೀರಿನಲ್ಲಿ ಮುಳುವೆ. ನಗರಸಭೆ ಅಧಿಕಾರಿಗಳ ವಿರುದ್ಧ ಬಾಡಿಗೆದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.