ADVERTISEMENT

ಕೊಲೆಗೆ ಯತ್ನ, ಅಪಹರಣ ಆರೋಪ: ಸುನಾಮಿ ಕಿಟ್ಟಿ ಸೇರಿ ನಾಲ್ವರ ಬಂಧನ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2018, 8:54 IST
Last Updated 3 ಮಾರ್ಚ್ 2018, 8:54 IST
ಕೊಲೆಗೆ ಯತ್ನ, ಅಪಹರಣ ಆರೋಪ: ಸುನಾಮಿ ಕಿಟ್ಟಿ ಸೇರಿ ನಾಲ್ವರ ಬಂಧನ
ಕೊಲೆಗೆ ಯತ್ನ, ಅಪಹರಣ ಆರೋಪ: ಸುನಾಮಿ ಕಿಟ್ಟಿ ಸೇರಿ ನಾಲ್ವರ ಬಂಧನ   

ಬೆಂಗಳೂರು: ಜ್ಞಾನ ಭಾರತಿ ಠಾಣೆ ವ್ಯಾಪ್ತಿಯಲ್ಲಿ ತೌಸಿತ್ ಹಾಗೂ ಗಿರೀಶ್ ಎಂಬುವರ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಆರೋಪದಡಿ ಸುನಾಮಿ ಕಿಟ್ಟಿ ಹಾಗೂ ಆತನ ಮೂವರು ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.

ಫೆ. 28ರಂದು ಇಬ್ಬರನ್ನೂ ಅಪಹರಣ ಮಾಡಿದ್ದ ಆರೋಪಿಗಳು ಹೊರಮಾವು ಬಳಿಯ ತೋಟದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟಿದ್ದರು. ಅವರಿಂದ ತಪ್ಪಿಸಿಕೊಂಡ ಗಿರೀಶ್ ಜ್ಞಾನಭಾರತಿ ಠಾಣೆಗೆ ದೂರು ನೀಡಿದ್ದರು.

ತನಿಖೆ ಕೈಗೊಂಡ ಪೊಲೀಸರು ಸುನಾಮಿ ಕಿಟ್ಟಿ, ಸಂತೋಷ, ಅರ್ಜುನ ಹಾಗೂ ಯೋಗೇಶ್ ಎಂಬುವರನ್ನು ಬಂಧಿಸಿದ್ದಾರೆ. ಅವರಿಂದ ಪಿಸ್ತೂಲ್ ಜಪ್ತಿ ಮಾಡಿದ್ದಾರೆ.

ADVERTISEMENT

ಮಹಿಳೆಯೊಬ್ಬರ ಜತೆ ತೌಸಿತ್ ಸಲುಗೆ ಬೆಳೆಸಿದ್ದರು. ಅವರ ಪತಿಯೇ ಈ ಕೃತ್ಯ ಎಸಗಲು ಆರೋಪಿಗಳಿಗೆ ಹೇಳಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.