ADVERTISEMENT

ಕೋನಹಳ್ಳಿಯಲ್ಲಿ ಸಿಡಿಲಿಗೆ ಎತ್ತು ಬಲಿ: ಇಬ್ಬರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2018, 8:29 IST
Last Updated 7 ಏಪ್ರಿಲ್ 2018, 8:29 IST
ನೂರಾರು ಎಕರೆಯಲ್ಲಿ ಭತ್ತದ ಬೆಳೆ ನೆಲಸಮವಾಗಿದೆ – ಪ್ರಜಾವಾಣಿ ಚಿತ್ರ
ನೂರಾರು ಎಕರೆಯಲ್ಲಿ ಭತ್ತದ ಬೆಳೆ ನೆಲಸಮವಾಗಿದೆ – ಪ್ರಜಾವಾಣಿ ಚಿತ್ರ   

ಯಾದಗಿರಿ: ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಇಡೀ ಬಿರುಗಾಳಿ ಸಹಿತ ಸುರಿದ ಮಳೆಗೆ ಯಾದಗಿರಿ, ಶಹಾಪುರ, ಸುರಪುರ, ಗುರುಮಠಕಲ್‌ ತಾಲ್ಲೂಕಿನ ವಿವಿಧ ಗ್ರಾಮಗಳ ಸುತ್ತಮತ್ತಲಿನ ನೂರಾರು ಎಕರೆಯಲ್ಲಿ ಭತ್ತದ ಬೆಳೆ ನೆಲಸಮವಾಗಿದ್ದು, ರೈತರು ಸಂಕಷ್ಟ ಎದುರಿಸುವಂತಾಗಿದೆ.

ಶುಕ್ರವಾರ ಸಂಜೆ ಹೊತ್ತಿನಿಂದಲೇ ಕಾರ್ಮೋಡ ಕವಿದಿತ್ತು. ರಾತ್ರಿ 7ರ ನಂತರ ನಿರಂತರವಾಗಿ ಬೀಸಿದ ಬಿರುಗಾಳಿ ಮಳೆಯಿಂದಾಗಿ ನಾಯ್ಕಲ್, ಅಬ್ಬೇತುಮಕೂರು, ಗುರಸಣಗಿ, ಹುಲ್‌ಕಲ್ (ಬಿ), ತಳಕು, ಹೆಡಗಿಮದ್ರಿ ಗ್ರಾಮಗಳ ರೈತರ ಭತ್ತದ ಬೆಳೆ ನೆಲಕಚ್ಚಿದ್ದು, ಅಂದಾಜು ₹ 10ಲಕ್ಷ ಬೆಳೆಹಾನಿ ಸಂಭವಿಸಿರಬಹುದು ಎಂದು ರೈತರಾದ ಪರಶುರಾಮ, ಅಂಜಿನಪ್ಪ ತಿಳಿಸಿದರು.

ವಡಗೇರಾ ತಾಲ್ಲೂಕಿನ ಕೋನಹಳ್ಳಿಯಲ್ಲಿ ಸಿಡಿಲಿಗೆ ಹನುಮಂತಪ್ಪ ಎಂಬುವರ ಎತ್ತು ಬಲಿಯಾಗಿದೆ. ಘಟನೆಯಲ್ಲಿ ಹನುಮಂತಪ್ಪ ಅವರ ಮಗಳು ದೇವಮ್ಮ (18) ಹಾಗೂ ತಂಗಿ ದೇವಮ್ಮ (45) ಎಂಬುವರಿಗೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಹಶೀಲ್ದಾರ್ ಮಲ್ಲೇಶ್ ತಂಗಾ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ್ದಾರೆ.

ADVERTISEMENT

ಶುಕ್ರವಾರ ರಾತ್ರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ 8.0 ಮಿಲಿ ಮೀಟರ್, ಸುರಪುರ ತಾಲ್ಲೂಕಿನಲ್ಲಿ 17.7 ಮಿ.ಮೀ, ಯಾದಗಿರಿ ತಾಲ್ಲೂಕಿನಲ್ಲಿ 7.2 ಮಿ.ಮೀ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 32.9 ಮಿ.ಮೀ, ಮಳೆ ಬಿದ್ದಿದೆ ಎಂದು ತಹಶೀಲ್ದಾರ್ ತಂಗಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.