ಹೊನ್ನಾವರ (ಉತ್ತರಕನ್ನಡ): ಅನಾರೋಗ್ಯದಿಂದ ಬಳಲುತ್ತಿರುವ ಯಕ್ಷಗಾನ ಕಲಾವಿದ, ಚಿಟ್ಟಾಣಿಯ ರಾಮಚಂದ್ರ ಹೆಗಡೆ (84) ಕೋಮಾ ಸ್ಥಿತಿಗೆ ಜಾರಿದ್ದಾರೆ.
ನ್ಯುಮೋನಿಯಾ ಹಾಗೂ ಲಘು ಪಾರ್ಶ್ವವಾಯುವಿನಿಂದ ಅಸ್ವಸ್ಥರಾಗಿದ್ದ ಅವರನ್ನು ಶುಕ್ರವಾರ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಚಿಟ್ಟಾಣಿ ಅವರಿಗೆ ಇದುವರೆಗೂ ಪ್ರಜ್ಞೆ ಬಂದಿಲ್ಲ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ’ ಎಂದು ಆಸ್ಪತ್ರೆ ವೈದ್ಯ ಡಾ.ಮಂಜುನಾಥ ಹಂದೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.