ADVERTISEMENT

ಕ್ರಿಕೆಟ್ ಬುಕ್ಕಿಗೆ ಟಿಕೆಟ್ ಮಾರಾಟ: ರೇವುನಾಯಕ ಬೆಳಮಗಿ ಆರೋಪ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 6:32 IST
Last Updated 21 ಏಪ್ರಿಲ್ 2018, 6:32 IST
ರೇವುನಾಯಕ ಬೆಳಮಗಿ ನಿವಾಸದಲ್ಲಿ ಬೆಂಬಲಿಗರ ಸಭೆ
ರೇವುನಾಯಕ ಬೆಳಮಗಿ ನಿವಾಸದಲ್ಲಿ ಬೆಂಬಲಿಗರ ಸಭೆ   

ಕಲಬುರ್ಗಿ: ಕಲಬುರ್ಗಿ ಗ್ರಾಮೀಣ ಮತ ಕ್ಷೇತ್ರದ ಬಿಜೆಪಿ ಟಿಕೆಟ್ ಅನ್ನು ಕ್ರಿಕೆಟ್ ಬುಕ್ಕಿಗೆ ಮಾರಾಟ ಮಾಡಲಾಗಿದೆ ಎಂದು ಟಿಕೆಟ್ ವಂಚಿತ ಅಭ್ಯರ್ಥಿ ರೇವುನಾಯಕ ಬೆಳಮಗಿ ಆರೋಪಿಸಿದರು.

ಕೇಂದ್ರ ಸಮಿತಿ ನನ್ನ ಹೆಸರನ್ನೇ ಅಂತಿಮಗೊಳಿಸಿತ್ತು. ಆದರೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಕೊನೆ ಘಳಿಗೆಯಲ್ಲಿ ಬಸವರಾಜ ಮತ್ತಿಮೂಡಗೆ ಟಿಕೆಟ್ ಅಂತಿಮಗೊಳಿಸಿದ್ದಾರೆ.

ಹಣಕ್ಕೆ ಟಿಕೆಟ್ ಮಾರಿಕೊಳ್ಳಲಾಗುತ್ತಿದೆ ಎಂಬ ಸುದ್ದಿ ಹರಡಿತ್ತು. ಬಸವರಾಜ ಮತ್ತಿಮೂಡಗೆ ಟಿಕೆಟ್ ನೀಡಿರುವುದು ಅದನ್ನು ಸಾಬೀತು ಪಡಿಸಿದೆ. ಮತ್ತಿಮೂಡ ಪಕ್ಷಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ, ಏನು ಸೇವೆ ಸಲ್ಲಿಸಿದ್ದಾರೆ ಎಂಬುದನ್ನು ಯಡಿಯೂರಪ್ಪ ಸ್ಪಷ್ಟಪಡಿಸಲಬೇಕು ಎಂದು ಒತ್ತಾಯಿಸಿದರು.

ADVERTISEMENT

ಬೆಂಬಲಿಗರ ಸಭೆ

ಕಲಬುರ್ಗಿ ಗ್ರಾಮೀಣ ಮತ ಕ್ಷೇತ್ರದ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದ ರೇವುನಾಯಕ ಬೆಳಮಗಿ ಅವರು ಬೆಂಬಲಿಗರ ಸಭೆ ನಡೆಸುತ್ತಿದ್ದಾರೆ.

ಇಲ್ಲಿನ ಸಂತೋಷ ಕಾಲೊನಿಯ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸುತ್ತಿರುವ ಅವರು, ಸಭೆಯ ಬಳಿಕ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.