ADVERTISEMENT

ಖುದ್ದು ಹಾಜರಿಗೆ ಆದೇಶ

ವಿ.ಶಂಕರ್‌ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2018, 19:30 IST
Last Updated 26 ಮಾರ್ಚ್ 2018, 19:30 IST

ಬೆಂಗಳೂರು: ‘ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರೋಪ ನಿಗದಿಗೆ ಸಂಬಂಧಿಸಿದಂತೆ ಕೋರ್ಟ್‌ಗೆ ಖುದ್ದು ಹಾಜರಾಗಿ’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವಿ.ಶಂಕರ್‌ ಹಾಗೂ ಬೆಂಗಳೂರು ಉತ್ತರ ತಾಲ್ಲೂಕು ತಹಶೀಲ್ದಾರ್ ಡಿ.ಆರ್.ಮಂಜುನಾಥ್ ಅವರಿಗೆ ಹೈಕೋರ್ಟ್ ಸೂಚಿಸಿದೆ.

ಈ ಕುರಿತಂತೆ ಹೆಸರಘಟ್ಟ ಹೋಬಳಿಯ ರಾಜಾನುಕುಂಟೆ ನರಸಿಂಹಯ್ಯ ಎಂಬುವರು ಸೇರಿದಂತೆ ಮೂವರು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಮತ್ತು ನ್ಯಾಯಮೂರ್ತಿ ಎಸ್‌.ಸುನಿಲ್ ದತ್‌ ಯಾದವ್ ಅವರಿದ್ದ ವಿಭಾಗೀಯ  ಆದೇಶಿಸಿದೆ.

‘ನರಸಿಂಹಯ್ಯ ಎಂಬುವರ ಜಮೀನಿನ ನೋಂದಣಿ ಮಾಡಿಕೊಡುವಂತೆ ಹೈಕೋರ್ಟ್‌ ನೀಡಿದ್ದ ಆದೇಶ ಜಾರಿಗೊಳಿಸಿಲ್ಲ’ ಎಂಬ ಆರೋಪದಡಿ ಈ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.