ಹುಬ್ಬಳ್ಳಿ: ‘ಹುಬ್ಬಳ್ಳಿಯ ಗಣೇಶಪೇಟೆಯು ನನಗೆ ಪಾಕಿಸ್ತಾನದಂತೆ ಕಾಣಿಸುತ್ತದೆ’ ಎಂದು ಮುತುವಲ್ಲಿ ಅಬ್ದುಲ್ ಹಮೀದ್ ಖೈರಾತಿ ಅವರು ಹೇಳಿಕೆ ನೀಡಿದ್ದನ್ನು ಖಂಡಿಸಿ ಹಾಗೂ ಆ ವೇಳೆ ವೇದಿಕೆಯಲ್ಲಿ ಇದ್ದ ಉತ್ತರ ಉಪ ವಿಭಾಗ ಎಸಿಪಿ ದಾವೂದ್ ಖಾನ್ ಅವರನ್ನು ಅಮಾನತುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಮುಖಂಡರು ಶಹರ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
‘ದೇಶದ್ರೋಹಿ ಹೇಳಿಕೆ ನೀಡಿರುವ ಖೈರಾತಿ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು. ನಾಲ್ಕು ದಿನಗಳ ಒಳಗೆ ದಾವೂದ್ ಖಾನ್ ಅವರನ್ನು ಬಂಧಿಸದಿದ್ದರೆ ಅವಳಿ ನಗರ ಬಂದ್ಗೆ ಕರೆ ನೀಡಲಾಗುವುದು’ ಎಂದು ಬಿಜೆಪಿ ಮುಖಂಡರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.