ADVERTISEMENT

ಗಗನ್‌ದೀಪ್‌ಗೆ ಬಡ್ತಿ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2011, 19:30 IST
Last Updated 7 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಕೆ.ವಿ.ಗಗನ್‌ದೀಪ್ ಅವರಿಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಬಡ್ತಿ ನೀಡಿ, ಕಾರಾಗೃಹಗಳ ಎಡಿಜಿಪಿ ಮತ್ತು ಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ.

ಮೊಹಮದ್ ವಜೀರ್ ಅಹಮದ್ ಅವರನ್ನು ಈಶಾನ್ಯ ವಲಯದ ಐಜಿಪಿಯಾಗಿ ಗುಲ್ಬರ್ಗಕ್ಕೆ ವರ್ಗಾವಣೆ ಮಾಡಲಾಗಿದೆ. ಚುನಾವಣಾ ಆಯೋಗದ ಅನುಮತಿ ಪಡೆದೇ ಈ ವರ್ಗಾವಣೆಗಳನ್ನು ಸರ್ಕಾರ ಮಾಡಿದೆ.
ಐಎಎಸ್ ಅಧಿಕಾರಿಯಾದ ಗುಲ್ಬರ್ಗ ಮಹಾನಗರ ಪಾಲಿಕೆ ಆಯುಕ್ತ ಮನೋಜ್ ಜೈನ್ ಅವರನ್ನು ರಾಯಚೂರು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಐಎಫ್‌ಎಸ್ ಅಧಿಕಾರಿ ಕೆ.ಎಂ.ನಾರಾಯಣಸ್ವಾಮಿ ಅವರನ್ನು ವಿಜಾಪುರ ಜಿಲ್ಲಾ ಪಂಚಾಯಿತಿ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.