ADVERTISEMENT

ಗಾಂಧಿ ಜಯಂತಿ: ಮದ್ಯದ ಅಮಲಿನಲ್ಲಿ ಶಿಕ್ಷಕ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2017, 19:30 IST
Last Updated 2 ಅಕ್ಟೋಬರ್ 2017, 19:30 IST
ಪಾವಗಡ ಬಸ್ ನಿಲ್ದಾಣದಲ್ಲಿ ಸೋಮವಾರ ಶಿಕ್ಷಕರೊಬ್ಬರು ಕುಡಿದು ಬಿದ್ದಿರುವುದು
ಪಾವಗಡ ಬಸ್ ನಿಲ್ದಾಣದಲ್ಲಿ ಸೋಮವಾರ ಶಿಕ್ಷಕರೊಬ್ಬರು ಕುಡಿದು ಬಿದ್ದಿರುವುದು   

ಪಾವಗಡ: ತಾಲ್ಲೂಕಿನ ಭೂಪೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರೊಬ್ಬರು ಗಾಂಧಿ ಜಯಂತಿಯಂದು ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಓಡಾಡುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.

ಭೂಪೂರು ಶಾಲೆಗೆ ಈಚೆಗೆ ನಿಯೋಜನೆಗೊಂಡಿರುವ ಶಿಕ್ಷಕ ರಾಮಾಂಜಿನಪ್ಪ ಸೋಮವಾರ ಬೆಳ್ಳಂಬೆಳಿಗ್ಗೆ ಪಟ್ಟಣದ ಬಸ್ ನಿಲ್ದಾಣದ ಬಳಿ ಮದ್ಯಪಾನ ಮಾಡಿ ಬಿದ್ದು, ಹೊರಳಾಡುತ್ತಿರುವುದನ್ನು ಕಂಡ ಕೆಲವರು, ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಜಾಲ ತಾಣಗಳಲ್ಲಿ ವೈರಲ್ ಆಗಿದೆ.

ಇವರು ಶಾಲೆಗೂ ಮದ್ಯಪಾನ ಮಾಡಿ ಹೋಗುತ್ತಾರೆ ಎಂದು ಕೆಲವರು ಆರೋಪಿಸಿದ್ದಾರೆ. ಮಕ್ಕಳಿಗೆ ಪಾಠ ಹೇಳಿಕೊಡುವ ಶಿಕ್ಷಕ ಗಾಂಧಿ ಜಯಂತಿಯಂದು ಮದ್ಯ ಸೇವಿಸಿ ಕಿರಿ ಕಿರಿ ಮಾಡಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.