ADVERTISEMENT

ಗುಂಡಿ ತೋಡಿ ಮಲಗಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2017, 19:30 IST
Last Updated 12 ಜುಲೈ 2017, 19:30 IST
ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಸದಸ್ಯರು ಮದ್ದೂರು ತಾಲ್ಲೂಕು ದೇಶಹಳ್ಳಿ ಬಳಿ ಬುಧವಾರ ಮದ್ದೂರು ಕೆರೆಯಂಗಳದಲ್ಲಿ ಗುಂಡಿ ತೋಡಿ ಮಲಗುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು
ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಸದಸ್ಯರು ಮದ್ದೂರು ತಾಲ್ಲೂಕು ದೇಶಹಳ್ಳಿ ಬಳಿ ಬುಧವಾರ ಮದ್ದೂರು ಕೆರೆಯಂಗಳದಲ್ಲಿ ಗುಂಡಿ ತೋಡಿ ಮಲಗುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು   

ಮದ್ದೂರು: ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಸದಸ್ಯರು ಮದ್ದೂರು ತಾಲ್ಲೂಕು ದೇಶಹಳ್ಳಿ ಮದ್ದೂರು ಕೆರೆಯಂಗಳದಲ್ಲಿ ಗುಂಡಿ ತೋಡಿ ಮಲಗುವ ಮೂಲಕ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

ವೇದಿಕೆಯಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ 6ನೇ ದಿನಕ್ಕೆ ಕಾಲಿಟ್ಟಿದೆ. ಧರಣಿ ನಿರತ ಸ್ಥಳದ ಪಕ್ಕದಲ್ಲಿ ಜೆಸಿಬಿ ಯಂತ್ರದಿಂದ ಗುಂಡಿಗಳನ್ನು ತೆಗೆದ ಪ್ರತಿಭಟನಾಕರಾರು, ಗುಂಡಿಗಳಲ್ಲಿ ಶವದ ರೀತಿ ಮಲಗಿ ‘ನೀರು ಕೊಡಿ ಇಲ್ಲವೆ ಮಣ್ಣು ಹಾಕಿ’ ಎಂದು ಘೋಷಣೆ ಕೂಗಿದರು.
ಸ್ಥಳಕ್ಕೆ ಬಂದ ತಹಶೀಲ್ದಾರ್ ಎಸ್.ಹರ್ಷ, ಪ್ರತಿಭಟನೆ ನೇತೃತ್ವ ವಹಿಸಿರುವ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶಗೌಡ ಜತೆ ಮಾತುಕತೆ ನಡೆಸಿದರು.

‘ಐದು ದಿನಗಳಿಂದ ನಡೆಯುತ್ತಿರುವ ನಿರಂತರ ಧರಣಿ ಬಗ್ಗೆ ಈಗಾಗಲೇ ಸರ್ಕಾರಕ್ಕೆ ವರದಿ ನೀಡಿದ್ದೇನೆ. ಕೆಆರ್‌ಎಸ್‌ ಜಲಾಶಯದಿಂದ ಜಿಲ್ಲೆಯ ಕೆರೆಕಟ್ಟೆಗಳಿಗೆ ನೀರು ತುಂಬಿಸುವಂತೆ ಕೋರಿದ್ದೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.