ಗುಂಡ್ಲುಪೇಟೆ: ಪ್ರತಿಷ್ಠೆಯ ಕಣವಾಗಿರುವ ಗುಂಡ್ಲುಪೇಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾನುವಾರ ಬೆಳಿಗ್ಗೆ 11ಕ್ಕೆ ಶೇ 23.73 ಮತದಾನ ನಡೆದಿದೆ.
ಎಚ್.ಎಸ್.ಮಹದೇವಪ್ರಸಾದ್ ಅಕಾಲಿಕ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿರುವ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ನ ಎಂ.ಸಿ.ಮೋಹನಕುಮಾರಿ (ಗೀತಾ) ಹಾಗೂ ಬಿಜೆಪಿ ಸಿ.ಎಸ್.ನಿರಂಜಕುಮಾರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ.
ವಿವಿ ಪ್ಯಾಟ್ ಯಂತ್ರದಲ್ಲಿನ ದೋಷದಿಂದ ತೆರಕಣಾಂಬಿ ಮತಗಟ್ಟೆ 108ರಲ್ಲಿ ಒಂದು ಗಂಟೆಕಾಲ ಮತದಾನ ವಿಳಂಬವಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.