ADVERTISEMENT

ಗುಜರಾತ್‌ಗೆ ಚಿರತೆಗಳು

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2017, 19:55 IST
Last Updated 28 ಅಕ್ಟೋಬರ್ 2017, 19:55 IST
ಗುಜರಾತ್‌ಗೆ ಚಿರತೆಗಳು
ಗುಜರಾತ್‌ಗೆ ಚಿರತೆಗಳು   

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ–ಸಿಂಹಧಾಮದ 12 ಚಿರತೆಗಳನ್ನು ಗುಜರಾತ್‌ನ ಅಹಮದಾಬಾದ್ ಹಾಗೂ ಬೆಂಗಳೂರು ಸಮೀಪದ ಬನ್ನೇರುಘಟ್ಟಕ್ಕೆ ಕಳುಹಿಸಲಾಗುತ್ತಿದೆ.

ಸಿಂಹಧಾಮದಲ್ಲಿ 6 ಮರಿಗಳು ಒಳಗೊಂಡಂತೆ ಪ್ರಸ್ತುತ 26 ಚಿರತೆಗಳಿವೆ. ಅವುಗಳಲ್ಲಿ 6 ಚಿರತೆಗಳನ್ನು ಅಹಮದಾಬಾದ್‌ನ ಕಮಲಾ ನೆಹರೂ ಜೈವಿಕ ಉದ್ಯಾನಕ್ಕೆ ಹಾಗೂ ಅಷ್ಟೇ ಸಂಖ್ಯೆಯ ಚಿರತೆಗಳನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಕಳುಹಿಸಲಾಗುತ್ತಿದೆ.

ಮೊದಲು 18 ಚಿರತೆಗಳನ್ನು ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ, ಮೈಸೂರು ಸಮೀಪದ ಚಾಮುಂಡಿ ವನ್ಯಜೀವಿ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಬೇಕಿತ್ತು. ಆದರೆ, ಅಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳದ ಕಾರಣ ಸದ್ಯ ಎರಡು ಉದ್ಯಾನಗಳಿಗೆ 12 ಚಿರತೆ ಕಳುಹಿಸಲಾಗುತ್ತಿದೆ ಎಂದು ವನ್ಯಜೀವಿ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.