ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕು ಹಾಗೂ ಸಿಂಧನೂರು ತಾಲ್ಲೂಕಿನ ವಿವಧೆಡೆ ಭಾನುವಾರ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಸಿಂಧನೂರಿನ ಸಾಲಗುಂದಾ ಗ್ರಾಮದಲ್ಲಿ ಸಿಡಿಲು ಬಡಿದು ಒಬ್ಬ ಕುರಿಗಾರ ಮತ್ತು ಮೂರು ಕುರಿಗಳು ಮೃತಪಟ್ಟಿವೆ.
ಸಾಲಗುಂದಾ ಗ್ರಾಮದ ಮೆಹಬೂಬ್ ರಾಜಾಸಾಬ್ ನಾಯಕ (18) ಮೃತಪಟ್ಟಿದ್ದಾರೆ. ಲಿಂಗಸುಗೂರು ಪಟ್ಟಣ, ಮುದಗಲ್, ಹಟ್ಟಿ ಚಿನ್ನದ ಗಣಿ ಹಾಗೂ ಕವಿತಾಳದಲ್ಲಿ ಸಾಧಾರಣ ಮಳೆ ಸುರಿದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.