
ಪ್ರಜಾವಾಣಿ ವಾರ್ತೆಬೆಂಗಳೂರು: ಅರ್ಜಿದಾರರೊಬ್ಬರಿಗೆ ಉತ್ತರ ಪತ್ರಿಕೆಗಳ ಪ್ರತಿ ನೀಡಲು ವಿಳಂಬ ಮಾಡಿದ ಗುಲ್ಬರ್ಗದ ಎಂ.ಆರ್. ವೈದ್ಯಕೀಯ ಕಾಲೇಜು ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್ಜಿಯುಎಚ್ಎಸ್) ತಲಾ ₨ 15 ಸಾವಿರ ದಂಡ ಪಾವತಿಸಬೇಕು ಎಂದು ಹೈಕೋರ್ಟ್ ಬುಧವಾರ ಆದೇಶಿಸಿದೆ.
ಡಾ. ವಿಜಯಸೇನ ರೆಡ್ಡಿ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರು ನಡೆಸಿದರು. ಅವರು ರೇಡಿಯಾಲಜಿ ವಿಷಯದಲ್ಲಿ ಸ್ನಾತಕೋತ್ತರ ಪರೀಕ್ಷೆ ಬರೆದಿದ್ದರು. ಫಲಿತಾಂಶ ತಮ್ಮ ನಿರೀಕ್ಷೆಯಂತೆ ಬಾರದ ಕಾರಣ ಉತ್ತರ ಪತ್ರಿಕೆಗಳ ಪ್ರತಿ ನೀಡುವಂತೆ ಅರ್ಜಿ
ಸಲ್ಲಿಸಿದ್ದರು. ಆದರೆ ನಿಗದಿತ ಸಮಯದಲ್ಲಿ ಪ್ರತಿಗಳು ದೊರೆಯಲಿಲ್ಲ. ಹೀಗಾಗಿ ಅವರು ಕೋರ್ಟ್ ಮೆಟ್ಟಿಲೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.