ನೆಲಮಂಗಲ: ಇಲ್ಲಿನ ಆದಿತ್ಯ ಕಾಲೇಜು ಮೈದಾನದಲ್ಲಿ ಇಂದು ಆರಂಭವಾದ ಎರಡು ದಿನಗಳ ಕನ್ನಡ ಚಲನಚಿತ್ರ ರಂಗದ ಕ್ರಿಕೆಟ್ ಪಂದ್ಯಾವಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಆಟಗಾರರಿಗೆ ಶುಭ ಕೋರಿದರು.
ಪಂದ್ಯಾವಳಿಯನ್ನು ಉದ್ಘಾಟಿಸುವಂತೆ ಚಿತ್ರನಟ ಸುದೀಪ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಗುರುವಾರ ಬೆಳಿಗ್ಗೆ ಸುದೀಪ್ ಅವರು ಮುಖ್ಯಮಂತ್ರಿಗಳ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ ಬಗ್ಗೆ ಸಿದ್ದರಾಮಯ್ಯ ಸಹ ಟ್ವೀಟ್ ಮಾಡಿದ್ದರು.
</p></p>
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.