ADVERTISEMENT

ಚಾಮರಾಜನಗರದಲ್ಲಿ ಸಿಡಿಲು ಬಡಿದು ಮಹಿಳೆ ಸಾವು, ಮಗು ಪಾರು

​ಪ್ರಜಾವಾಣಿ ವಾರ್ತೆ
Published 25 ಮೇ 2018, 5:35 IST
Last Updated 25 ಮೇ 2018, 5:35 IST
ಗುರುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಸೇಂಟ್ ಜೋಸೆಫ್ ಆಸ್ಪತ್ರೆ ಆವರಣದಲ್ಲಿರುವ ಕೊಠಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ‌.
ಗುರುವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಸೇಂಟ್ ಜೋಸೆಫ್ ಆಸ್ಪತ್ರೆ ಆವರಣದಲ್ಲಿರುವ ಕೊಠಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ‌.   

ಚಾಮರಾಜನಗರ: ಜಿಲ್ಲೆಯ ಬಿಸಿಲವಾಡಿಯಲ್ಲಿ ಸಿಡಿಲು ಬಡಿದು ಸೀತಾ (25) ಎಂಬುವವರು ಮೃತಪಟ್ಟಿದ್ದಾರೆ. 

ಸೇಲಂ ಜಿಲ್ಲೆಗೆ ಸೇರಿದ ಇವರು ಕೂಲಿ ಕೆಲಸಕ್ಕಾಗಿ ತಾಳವಾಡಿಯಿಂದ ನಡೆದುಕೊಂಡು ಬರುತ್ತಿದ್ದಾಗ ಸಿಡಿಲು ಬಡಿದಿದೆ. ಇವರ ಪತಿ ರಂಜನ್ ಹಾಗೂ ಮಗು ಅಪಾಯದಿಂದ ಪಾರಾಗಿದ್ದಾರೆ‌.

ರಾತ್ರಿ ಸುರಿದ ಮಳೆಯ ಹೊಡೆತಕ್ಕೆ ಹರದನಹಳ್ಳಿಯ ಬಂಡಿಗೇರಿಯಲ್ಲಿ ಎರಡು ಮನೆಗಳ ಗೋಡೆಗಳು ಕುಸಿದಿವೆ.

ADVERTISEMENT

ಮಳೆ–ಗಾಳಿಯಿಂದ ಜಿಲ್ಲೆಯ ಸೇಂಟ್ ಜೋಸೆಫ್ ಆಸ್ಪತ್ರೆ ಆವರಣದಲ್ಲಿರುವ ಕೊಠಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ‌.

**


30 ವರ್ಷಗಳಿಂದ ಬರಿದಾಗಿದ್ದ ದೊಡ್ಡ ಅರಸನ ಕೊಳ ಮಳೆನೀರಿನಿಂದ ಭರ್ತಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.