ಚಿಕ್ಕಮಗಳೂರು: ಬ್ರೆವೆಟ್ ಸೈಕಲ್ ಯಾನಕ್ಕೆ ಭಾನುವಾರ ಇಲ್ಲಿ ಚಾಲನೆ ನೀಡಲಾಯಿತು. ಸೈಕಲ್ ಯಾನದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಭಾಗಿದ್ದರು.
ಯಾನ ಚಿಕ್ಕಮಗಳೂರಿನಿಂದ ಆಲ್ದೂರು–ಬಾಳೆಹೊನ್ನೂರು–ಕೊಪ್ಪ ಮಾರ್ಗವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕವಿಮನೆ (ಕುಪ್ಪಳಿ) ತಲುಪಿ ಚಿಕ್ಕಮಗಳೂರಿಗೆ ವಾಪಸಾಗಲಿದೆ.
ಶಿವಮೊಗ್ಗ, ಮಂಡ್ಯ, ಬೆಂಗಳೂರು, ಹಾಸನ, ಚಿಕ್ಕಮಗಳೂರು, ಉಡುಪಿ ಮೊದಲಾದ ಜಿಲ್ಲೆಗಳ 43 ಮಂದಿ ಭಾಗವಹಿಸಿದ್ದಾರೆ. ಯಾನದ ಅವಧಿ 13.30ಗಂಟೆ ನಿಗದಿಪಡಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.