ಕೋಲಾರ: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಬಂಗಾರುಪಾಳ್ಯಂ ಬಳಿ ಭಾನುವಾರ ನಸುಕಿನಲ್ಲಿ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ರಾಜ್ಯದ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ರಾಜ್ಯದ ಕಾಸರಗೋಡಿನವರು. ಅವರು ಕಾರಿನಲ್ಲಿ ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
(ಅಪಘಾತದಲ್ಲಿ ಕಾರು ಜಖಂಗೊಂಡಿರುವುದು)
ಎಸ್ಆರ್ಎಸ್ ಟ್ರಾವೆಲ್ಸ್ ಬಸ್ ಚಾಲಕ ಕಂಟೇನರ್ ಹಿಂದಿಕ್ಕುವ ಯತ್ನದಲ್ಲಿ ಎದುರುಗಡೆಯಿಂದ ಬರುತ್ತದ್ದ ಕಾರಿಗೆ ವಾಹನ ಗುದ್ದಿಸಿದ್ದಾನೆ. ಈ ಅಪಘಾತದಲ್ಲಿ ಮಹಿಳೆ ಸೇರಿ ನಾಲ್ಕು ಮಂದಿ ಮೃತ ಪಟ್ಟಿದ್ದು, ಗಾಯಗೊಂಡಿರುವ ನಾಲ್ಕು ಜನರನ್ನು ಬಂಗಾರುಪಾಳ್ಯಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ಅಪಘಾತದಲ್ಲಿ ಗಾಯಗೊಂಡಿರುವ ಮಹಿಳೆ)
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.