ADVERTISEMENT

ಚಿತ್ರದುರ್ಗದಲ್ಲಿ ಬಂದ್‌‍ಗೆ ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 28 ಮೇ 2018, 4:23 IST
Last Updated 28 ಮೇ 2018, 4:23 IST
ಚಿತ್ರದುರ್ಗದಲ್ಲಿ ಬಂದ್‌‍ಗೆ ಮಿಶ್ರ ಪ್ರತಿಕ್ರಿಯೆ
ಚಿತ್ರದುರ್ಗದಲ್ಲಿ ಬಂದ್‌‍ಗೆ ಮಿಶ್ರ ಪ್ರತಿಕ್ರಿಯೆ   

ಚಿತ್ರದುರ್ಗ: ಬಿಜೆಪಿ ಕರೆ ನೀಡಿದ ಬಂದ್ ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ.
ಸೋಮವಾರ ಬೆಳಿಗ್ಗೆ ಎಂದಿನಂತೆ ಜನಜೀವನ ಸಹಜವಾಗಿತ್ತು. ಅಂಗಡಿಗಳು ಬಾಗಿಲು ತೆರೆದಿದ್ದವು. ಗಾಂಧಿ ವೃತ್ತಕ್ಕೆ ಧಾವಿಸಿದ ಪ್ರತಿಭಟನಾಕಾರರು ಅಂಗಡಿ ಬಾಗಿಲು ಮುಚ್ಚಿಸುವಂತೆ ಮನವಿ ಮಾಡಿದರು. ವಾಹನಗಳನ್ನು ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ.

ಚಿತ್ರದುರ್ಗ ಕ್ಷೇತ್ರದ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗೆ ಇಳಿದಿದ್ದಾರೆ. ಪಿ.ಬಿ.ರಸ್ತೆಯಲ್ಲಿ ಸಾಗುವ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ವಾಹನ ಸಂಚಾರ ಸಹಜವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT