ADVERTISEMENT

ಚಿತ್ರದುರ್ಗ: ಜ್ಯೋತಿ ಬೆಳಗಿಸಿ ಸಾರ್ವಜನಿಕ ಸಭೆಗೆ ಚಾಲನೆ ನೀಡಿದ ಅಮಿತ್‌ ಶಾ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2018, 11:02 IST
Last Updated 29 ಏಪ್ರಿಲ್ 2018, 11:02 IST
ಚಿತ್ರದುರ್ಗ: ಜ್ಯೋತಿ ಬೆಳಗಿಸಿ ಸಾರ್ವಜನಿಕ ಸಭೆಗೆ ಚಾಲನೆ ನೀಡಿದ ಅಮಿತ್‌ ಶಾ
ಚಿತ್ರದುರ್ಗ: ಜ್ಯೋತಿ ಬೆಳಗಿಸಿ ಸಾರ್ವಜನಿಕ ಸಭೆಗೆ ಚಾಲನೆ ನೀಡಿದ ಅಮಿತ್‌ ಶಾ   

ಚಿತ್ರದುರ್ಗ: ಹಿರಿಯೂರಿನ ನೆಹರೂ ಮೈದಾನದಲ್ಲಿ ನಡೆಯುತ್ತಿರುವ ಸಾರ್ವಜನಿಕ ಸಭೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಇದೇ ವೇಳೆ ಕಬ್ಬು, ತೆಂಗು, ಅಡಿಕೆ ಸಸಿಗಳಿಗೆ ನೀರು ಹನಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ‌ ನೀಡಿದರು.

ಕಾರ್ಯಕ್ರಮದಲ್ಲಿ ಚಿತ್ರದುರ್ಗ ಕ್ಷೇತ್ರದ ಅಭ್ಯರ್ಥಿ ಶಾಸಕ ಜಿಹೆಚ್‌.ತಿಪ್ಪಾರೆಡ್ಡಿ, ಹೊಸದುರ್ಗ ಅಭ್ಯರ್ಥಿ ಮಾಜಿ ಸಚಿವ ಗೂಳಿಹಟ್ಟಿ ಡಿ.ಶೇಖರ್, ಹಿರಿಯೂರು ಕ್ಷೇತ್ರದ ಅಭ್ಯರ್ಥಿ ಪೂರ್ಣಿಮಾ, ಚಳ್ಳಕೆರೆ ಅಭ್ಯರ್ಥಿ ಕೆ.ಟಿ. ಕುಮಾರಸ್ವಾಮಿ, ಹೊಳಲ್ಕೆರೆ ಅಭ್ಯರ್ಥಿ ಮಾಜಿ ಶಾಸಕ ಎಂ.ಚಂದ್ರಪ್ಪ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.