ADVERTISEMENT

ಚುನಾವಣಾ ಆಯೋಗಕ್ಕೆ ದೂರು

ಬ್ರಾಹ್ಮಣರಿಗೆ ಮೀಸಲಾತಿ– ಪೂಜಾರಿ ಭರವಸೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2014, 19:30 IST
Last Updated 18 ಮಾರ್ಚ್ 2014, 19:30 IST

ಮಂಗಳೂರು: ‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಜನಾರ್ದನ ಪೂಜಾರಿ ಅವರು ಮೂಡುಬಿದಿರೆಯಲ್ಲಿ ಭಾನು­ವಾರ ಚುನಾವಣಾ ಪ್ರಚಾರ ನಡೆಸುವ ವೇಳೆ ಬ್ರಾಹ್ಮಣರಿಗೆ ಹಾಗೂ ಗೌಡ ಸಾರ­ಸ್ವತ ಬ್ರಾಹ್ಮಣರಿಗೆ ಮೀಸಲಾತಿ ಕಲ್ಪಿ­ಸು­ವುದಾಗಿ ಘೋಷಿ­ಸುವ ಮೂಲಕ ಮತದಾರರಿಗೆ ಆಮಿಷ ಒಡ್ಡಿ­ದ್ದಾರೆ’ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಚುನಾವಣಾಧಿಕಾರಿಗೆ ಮಂಗಳ­ವಾರ ದೂರು ನೀಡಿದೆ.

‘ನಾನು ಗೆದ್ದರೆ ಬ್ರಾಹ್ಮಣರಿಗೆ, ಗೌಡ ಸಾರಸ್ವತ ಬ್ರಾಹ್ಮಣರಿಗೆ ಮೀಸಲಾತಿ ಕೊಡಿ­ಸಲು ಪ್ರಯತ್ನಿಸುತ್ತೇನೆ. ಯುವಕ ಯುವತಿ­ಯರಿಗೆ ಸರ್ಕಾರಿ–ಖಾಸಗಿ ಸಹ­ಭಾಗಿತ್ವ ಯೋಜನೆ ಮೂಲಕ ಜಿಲ್ಲೆ­ಯಲ್ಲಿ ಉದ್ಯೋಗ ಸೃಷ್ಟಿಸುತ್ತೇನೆ’ ಎಂದು ಜನಾರ್ದನ ಪೂಜಾರಿ ಹೇಳಿ­ದ್ದನ್ನು ಪತ್ರಿಕೆಯೊಂದು ವರದಿ ಮಾಡಿದೆ.

‘ಜಾತಿ ಆಧಾರದಲ್ಲಿ ಆಮಿಷ ಒಡ್ಡುವುದು ಅಪರಾಧ. ನೀತಿ ಸಂಹಿತೆ ಉಲ್ಲಂಘಿಸಿದ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿ ಒತ್ತಾಯಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.