ADVERTISEMENT

ಚುನಾವಣಾ ನೀತಿ ಸಂಹಿತೆ ಜಾರಿ: ‘ಮೆಗಾ ಡೈರಿ’ ಉದ್ಘಾಟಿಸದೆ ಮರಳಿದ ಸಿಎಂ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2018, 8:04 IST
Last Updated 27 ಮಾರ್ಚ್ 2018, 8:04 IST
ಚುನಾವಣಾ ನೀತಿ ಸಂಹಿತೆ ಜಾರಿ: ‘ಮೆಗಾ ಡೈರಿ’ ಉದ್ಘಾಟಿಸದೆ ಮರಳಿದ ಸಿಎಂ
ಚುನಾವಣಾ ನೀತಿ ಸಂಹಿತೆ ಜಾರಿ: ‘ಮೆಗಾ ಡೈರಿ’ ಉದ್ಘಾಟಿಸದೆ ಮರಳಿದ ಸಿಎಂ   

ಚಿಕ್ಕಬಳ್ಳಾಪುರ: ಇಲ್ಲಿನ ಮೆಗಾ ಡೇರಿಯನ್ನು ಉದ್ಘಾಟನೆಗೆ ಬಂದಿದ್ದ ಸಿಎಂ ಸಿದ್ದರಾಮಯ್ಯ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಉದ್ಘಾಟನೆ ನೆರವೇರಿಸದೆ ಹಿಂದಿರುಗಿದರು.

ಮೇ.12ರಂದು ರಾಜ್ಯ ವಿಧಾನಸಭೆಗೆ ಮತದಾನ ಪ್ರಕಟಗೊಂಡ ನಂತರ ಚುನಾವಣಾ ನೀತಿ ಸಂಹಿತೆಯು ಜಾರಿಯಾಗಿದ್ದು, ಇದೇ ವೇಳೆ ಕೋಲಾರ–ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಕೋಚಿಮುಲ್‌) ನಂದಿ ಕ್ರಾಸ್‌ ಬಳಿ ₹160 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಮೆಗಾ ಡೇರಿ ಉದ್ಘಾಟನೆಗೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಷ್ಟೇ ನೀಡಿ ಮರಳಿದರು.

ಇದೇ ಸಮಯದಲ್ಲಿ ಮುಖ್ಯಮಂತ್ರಿ ಅವರ ಸರ್ಕಾರಿ ಕಾರು ಬಳಸದೆ ಶಾಸಕ ಡಾ.ಕೆ.ಸುಧಾಕರ ಅವರ ಕಾರಿನಲ್ಲಿ ಕುಳಿತರು. ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿರುವ ಚಿಕ್ಕಬಳ್ಳಾಪುರದ ಕಣಜೇನಹಳ್ಳಿಯ ಜೆಡಿಎಸ್‌ ಮುಖಂಡ ಕೆವಿ ನಾಗರಾಜ್‌ ಅವರ ಮನೆಗೆ ಪ್ರಯಾಣ ಬೆಳೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.