ಬೆಳಗಾವಿ: ‘ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸದಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನನ್ನ ಅಭಿಮಾನಿಗಳು ಮನವಿ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾನು ಕಣದಿಂದ ಹಿಂದೆ ಸರಿದಿದ್ದೇನೆ’ ಎಂದು ಸಣ್ಣ ಕೈಗಾರಿಕೆ ಸಚಿವ ಪ್ರಕಾಶ ಹುಕ್ಕೇರಿ ಶನಿವಾರ ಇಲ್ಲಿ ಸ್ಪಷ್ಟಪಡಿಸಿದರು.
 
 ‘ನೀವು ಈಗಾಗಲೇ ಸಚಿವರಾಗಿದ್ದು, ಇನ್ನೂ ನಾಲ್ಕು ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತೀರಿ. ಹೀಗಾಗಿ ನೀವು ಚುನಾವಣೆಗೆ ಸ್ಪರ್ಧಿಸಬೇಡಿ. ನಿಮ್ಮ ಮಗನನ್ನು ನಿಲ್ಲಿಸಿ, ನಾವು ಅವರನ್ನು ಗೆಲ್ಲಿಸುತ್ತೇವೆ ಎಂದು ಅಭಿಮಾನಿಗಳು ಒತ್ತಡ ಹಾಕಿದ್ದಾರೆ.
 
 ಹೀಗಾಗಿ ಮಗ ಗಣೇಶ ಹುಕ್ಕೇರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಬಳಿ ಬೇಡಿಕೆ ಇಟ್ಟಿದ್ದೇನೆ. ಇನ್ನೂ ಯಾರ ಹೆಸರು ಅಂತಿಮಗೊಂಡಿಲ್ಲ. ಗಣೇಶ ಹುಕ್ಕೇರಿ, ಲಕ್ಷ್ಮಣರಾವ್ ಚಿಂಗಳೆ ಹಾಗೂ ಎ.ಬಿ. ಪಾಟೀಲ ಈ ಮೂವರ ಪೈಕಿ ಯಾರಿಗೇ ಟಿಕೆಟ್ ನೀಡಿದರೂ ಬೇಸರವಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಾಗಿರುತ್ತೇನೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.