ADVERTISEMENT

ಜಗಳೂರು: ಕಣದಲ್ಲೇ ಉಳಿದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಪುಷ್ಪಾ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2018, 14:32 IST
Last Updated 27 ಏಪ್ರಿಲ್ 2018, 14:32 IST
ಜಗಳೂರು: ಕಣದಲ್ಲೇ ಉಳಿದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಪುಷ್ಪಾ
ಜಗಳೂರು: ಕಣದಲ್ಲೇ ಉಳಿದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಪುಷ್ಪಾ   

ಜಗಳೂರು: ಜಗಳೂರು ಕ್ಷೇತ್ರದಲ್ಲಿ ಅಂತಿಮ ಕ್ಷಣದಲ್ಲಿ ಕಾಂಗ್ರೆಸ್ ಟಿಕೆಟ್‌ ಕೈತಪ್ಪಿದ್ದ ಪುಷ್ಪಾ ಲಕ್ಷ್ಮಣಸ್ವಾಮಿ ಅವರು ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದಿದ್ದಾರೆ.

ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಶುಕ್ರವಾರ ಪುಷ್ಪಾ ಅವರು ನಾಮಪತ್ರ ಹಿಂಪಡೆಯಲಿಲ್ಲ. ಕಾಂಗ್ರೆಸ್‌ ವರಿಷ್ಠರ ಒತ್ತಡಕ್ಕೆ ಮಣಿದು ನಾಮಪತ್ರ ಹಿಂದಕ್ಕೆ ಪಡೆಯಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಕಾಂಗ್ರೆಸ್‌ಗೆ ಸೆಡ್ಡು ಹೊಡೆದಿರುವ ಅವರು ಪಕ್ಷೇತರರಾಗಿ ಕಣದಲ್ಲಿ ಉಳಿದಿದ್ದಾರೆ.

ಕಾಂಗ್ರೆಸ್‌ ಪಕ್ಷದ ಮೊದಲ ಅಧಿಕೃತ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಾಲಿ ಶಾಸಕ ಎಚ್‌.ಪಿ. ರಾಜೇಶ್ ಅವರನ್ನು ಕೈಬಿಟ್ಟು ಪುಷ್ಪಾ ಅವರಿಗೆ ಟಿಕೆಟ್‌ ಘೋಷಣೆಯಾಗಿ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು. ನಂತರ ನಡೆದ ಬೆಳವಣಿಗೆಯಲ್ಲಿ ಪುಷ್ಪಾ ಅವರ ಬದಲಿಗೆ ಶಾಸಕ ರಾಜೇಶ್‌ ಅವರಿಗೆ ಪಕ್ಷದ ‘ಬಿ’ ಫಾರಂ ನೀಡಲಾಗಿತ್ತು. ಇದರಿಂದಾಗಿ ಕಾಂಗ್ರೆಸ್‌ ಪಕ್ಷದ ವಿರುದ್ಧ ಬಂಡಾಯ ಎದ್ದ ಪುಷ್ಪಾ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.