ADVERTISEMENT

ಜನೋಪಕಾರಿ ಕಾರ್ಯಗಳನ್ನು ಮಾಡಿರುವ ಸಲ್ಮಾನ್‌ಗೆ ಬಿಡುಗಡೆ ನೀಡಬೇಕು: ಜಯಾ ಬಚ್ಚನ್‌

ಏಜೆನ್ಸೀಸ್
Published 5 ಏಪ್ರಿಲ್ 2018, 14:50 IST
Last Updated 5 ಏಪ್ರಿಲ್ 2018, 14:50 IST
ಜೋಧಪುರ ಸೆಂಟ್ರಲ್‌ ಜೈಲಿನಲ್ಲಿ ಸಲ್ಮಾನ್‌ಖಾನ್‌
ಜೋಧಪುರ ಸೆಂಟ್ರಲ್‌ ಜೈಲಿನಲ್ಲಿ ಸಲ್ಮಾನ್‌ಖಾನ್‌   

ನವದೆಹಲಿ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್‌(52)ಗೆ ಜೋಧಪುರ ನ್ಯಾಯಾಲಯ 5 ವರ್ಷ ಶಿಕ್ಷೆ ಪ್ರಕಟಿಸಿದ್ದು, ತೀರ್ಪಿನ ಕುರಿತು ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

19 ವರ್ಷ ಹಿಂದಿನ ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಸಲ್ಮಾನ್‌ಖಾನ್‌ಗೆ ಗುರುವಾರ ಶಿಕ್ಷೆ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಅವರು, ‘ಇದು ಬೇಸರದ ಸಂಗತಿ. ಅವರು ಅನೇಕ ಜನೋಪಕಾರಿ ಕಾರ್ಯಗಳನ್ನು ಮಾಡಿದ್ದಾರೆ. ಅವರಿಗೆ ಬಿಡುಗಡೆ ನೀಡಬೇಕು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT